ಕಾರ್ಕಳ ವಿಜೇತ ಶಾಲೆಯಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗದ ವಾರ್ಷಿಕೋತ್ಸವ ಸಂಪನ್ನ

KannadaprabhaNewsNetwork |  
Published : Jul 03, 2025, 11:51 PM IST
03ಕರಕರಿ | Kannada Prabha

ಸಾರಾಂಶ

ಕರಕರಿ ಫ್ರೆಂಡ್ಸ್ ಸೇವಾ ಬಳಗದ ೪ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶಿಷ್ಟವಾಗಿ ನೆರವೇರಿತು. ಸಂಸ್ಥೆಯ ವತಿಯಿಂದ ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಇಲ್ಲಿನ ಕರಕರಿ ಫ್ರೆಂಡ್ಸ್ ಸೇವಾ ಬಳಗದ ೪ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶಿಷ್ಟವಾಗಿ ನೆರವೇರಿತು. ಸಂಸ್ಥೆಯ ವತಿಯಿಂದ ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಅವಿನಾಶ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಸಮಿತಿ ಅಧ್ಯಕ್ಷ ಮಂಜುನಾಥ್, ಶೌರ್ಯ ಮತ್ತು ವಿಪತ್ತು ನಿರ್ವಹಣಾ ಘಟಕದ ತಾಲೂಕು ಅಧ್ಯಕ್ಷ ಸದಾನಂದ ಸಾಲ್ಯಾನ್, ಕರಕರಿ ಫ್ರೆಂಡ್ಸ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಎರ್ಲಪಾಡಿ, ಸಂಸ್ಥಾಪಕಿಯರಾದ ವೀಣಾ ಎಸ್. ಭಟ್ ಮತ್ತು ಅನಿತಾ ಸತೀಶ್, ಕಾರ್ಯದರ್ಶಿ ಸೌಮ್ಯ ಶೆಟ್ಟಿ, ಸದಸ್ಯರಾದ ಸಾನಿಧ್ಯ, ರಾಜೇಶ್ವರಿ ನವೀನ್, ನಾರಾಯಣ್ ಭಟ್, ರತ್ನಾಕರ್ ಶೆಟ್ಟಿ ಎಣ್ಣೆಹೊಳೆ, ವಿಜಯ್, ಸರೋಜಿನಿ ಹೆಗ್ಡೆ, ಸವಿತಾ, ಅಜಿತಾ, ವಿತೀನ್ ಶೆಟ್ಟಿ, ಸುರೇಶ್, ಸವಿನ್, ಅಜಿತ್, ಕುಶಲ ಸುವರ್ಣ, ಸಂತೋಷ್, ಶಶಿಕಾಂತ್, ರಜಿತಾ ಪ್ರಶಾಂತ್, ಸಚಿನ್, ಉಮೇಶ್ ಕೋಟ್ಯಾನ್ ವಾಮದಪದವು ಉಪಸ್ಥಿತರಿದ್ದರು.ವಿಶೇಷ ಶಿಕ್ಷಕಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಸ್ವಾಗತಿಸಿದರು. ವಿಶೇಷ ಶಿಕ್ಷಕಿ ಯಶೋದಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ