ಕರ್ನಾಟಕ ದೇಶಕ್ಕೆ ಮಾದರಿ: ಕೋನರಡ್ಡಿ

KannadaprabhaNewsNetwork |  
Published : Nov 13, 2025, 01:00 AM IST
ನವಲಗುಂದ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ತನು ಕನ್ನಡ, ನುಡಿ ಕನ್ನಡ, ಮನ ಕನ್ನಡ, ಕನ್ನಡ ನಮ್ಮ ಉಸಿರಾಗಿರಲಿ. ಕನ್ನಡಾಭಿಮಾನವನ್ನು ಪ್ರತಿ ದಿನ, ಪ್ರತಿ ಕ್ಷಣ ಬೆಳೆಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಮತ್ತಷ್ಟು ಗೌರವ ಬರುತ್ತದೆ.

ನವಲಗುಂದ:

ಹಲವು ಹಿರಿಯರ ತ್ಯಾಗ, ಪರಿಶ್ರಮದಿಂದ ಅಖಂಡ ಕರ್ನಾಟಕ ಅಸ್ತಿತ್ವಕ್ಕೆ ಬಂದಿದೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿರುವ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ತನು ಕನ್ನಡ, ನುಡಿ ಕನ್ನಡ, ಮನ ಕನ್ನಡ, ಕನ್ನಡ ನಮ್ಮ ಉಸಿರಾಗಿರಲಿ. ಕನ್ನಡಾಭಿಮಾನವನ್ನು ಪ್ರತಿ ದಿನ, ಪ್ರತಿ ಕ್ಷಣ ಬೆಳೆಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಮತ್ತಷ್ಟು ಗೌರವ ಬರುತ್ತದೆ. ಕನ್ನಡವನ್ನು ಎಲ್ಲರೂ ಉಳಿಸಿ ಬೆಳೆಸಬೇಕು ಎಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾವಿತ್ರಿಬಾಯಿ ಪೂಜಾರ, ಇಮಾಮಸಾಬ್‌ ವಲ್ಲೆಪ್ಪನವರ ಕಾರ್ಯಕ್ರಮ ಉದ್ಘಾಟಿಸಿದರು. ಸಾನ್ನಿಧ್ಯ ವಹಿಸಿದ್ದ ಅಜಾತ ನಾಗಲಿಂಗಸ್ವಾಮಿ ಮಠದ ವೀರೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಉಮೇಶ ನವಲಗುಂದ, ಶಿರಾಜ್ ಧಾರವಾಡ, ವಿಕ್ರಂ ಕುರಿ ಮಾತನಾಡಿದರು.

ನಾಟ್ಯ ಮಯೂರಿ ಸಂಘದಿಂದ ಜರುಗಿದ ಸಂಸ್ಕೃತಿ ಕಾರ್ಯಕ್ರಮಗಳಿಗೆ ಅಣ್ಣಿಗೇರಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದೇವರಾಜ ದಾಡಿಭಾವಿ ಚಾಲನೆ ನೀಡಿದರು. ಬಳಿಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಪೂರ್ವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯಿತು.

ತಹಸೀಲ್ದಾರ್ ಸುಧೀರ ಸಾವಕಾರ, ಶಿದ್ದಯ್ಯ ಹಿರೇಮಠ, ಶಿವಾನಂದ ಕರಿಗಾರ, ಶಂಕರಪ್ಪ ಅಂಬಲಿ, ಎಸ್.ಬಿ. ಪಾಟೀಲ, ರಘುನಾಥ ನಡುವಿನಮನಿ, ಮಹಬೂಸಾಬ್‌ ಯರಗುಪ್ಪಿ, ನಂದಿನಿ ಹಾದಿಮನಿ, ಶರಣು ಯಮನೂರ, ನಿಂಗಪ್ಪ ಕೆಳಗೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ