ಸಹ ಸಾಲ ವಿತರಣೆಗಾಗಿ ಕರ್ಣಾಟಕ ಬ್ಯಾಂಕ್- ನಾರ್ದನ್ ಆರ್ಕ್ ಕ್ಯಾಪಿಟಲ್ ಒಡಂಬಡಿಕೆ

KannadaprabhaNewsNetwork |  
Published : Jan 30, 2024, 02:00 AM IST
ಸಹ-ಸಾಲ ವಿತರಣೆಗಾಗಿ ಕರ್ಣಾಟಕ ಬ್ಯಾಂಕ್- ನಾರ್ದನ್ ಆರ್ಕ್ ಕ್ಯಾಪಿಟಲ್ ಒಡಂಬಡಿಕೆ ಮಾಡಲಾಯಿತು. | Kannada Prabha

ಸಾರಾಂಶ

ಸಹ-ಸಾಲ ನೀಡುವಿಕೆ, ಸಾಲದ ಮೂಲಗಳ ಆಯ್ಕೆ, ಸಾಲವಿಮೆ, ಸಾಲ ವಿತರಣೆ, ಸಂಗ್ರಹಣೆ ಮತ್ತು ಸಮನ್ವಯ ಪ್ರಕ್ರಿಯೆಗಳಿಗಾಗಿ ಕರ್ಣಾಟಕ ಬ್ಯಾಂಕ್ ಸುಲಭವಾಗಿ ಸಂಪರ್ಕ ಸಾಧಿಸಲು ಈ ಒಡಂಬಡಿಕೆಯು ಅನುವು ಮಾಡಿಕೊಡುತ್ತದೆ. ಸಾಲ ವಿತರಣೆಗಾಗಿ ಡಿಜಿಟಲ್ ಮೌಲ್ಯಮಾಪನ ಸಾಮರ್ಥ್ಯದಿಂದ ಸಾಲ ಪ್ರಕ್ರಿಯೆಯ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಮೂಲಕ, ಗ್ರಾಹಕರ ಅನುಭವವನ್ನು ಇನ್ನಷ್ಟು ಉತ್ತಮಗೊಳಿಸಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್, ಭಾರತದ ಪ್ರಮುಖ ವೈವಿಧ್ಯಮಯ ಹಣಕಾಸು ಸೇವಾ ವೇದಿಕೆಗಳಲ್ಲಿ ಒಂದಾದ ನಾರ್ದನ್ ಆರ್ಕ್ ಕ್ಯಾಪಿಟಲ್ ಸಂಸ್ಥೆಯೊಂದಿಗೆ ಸಹ- ಸಾಲ ವಿತರಣೆಗಾಗಿ ಒಡಂಬಡಿಕೆಗೆ ಸಹಿ ಮಾಡಿದೆ. ಇದು ಎರಡೂ ಸಂಸ್ಥೆಗಳ ಸಣ್ಣ ಪ್ರಮಾಣದ ಸಾಲಗಾರರಿಗೆ ಗ್ರಾಹಕ ಕೇಂದ್ರಿತ ಹಣಕಾಸು ಸೌಲಭ್ಯಗಳನ್ನು ನೀಡಲು ಅನುವು ಮಾಡಿಕೊಡುತ್ತದೆ.

ಸಹ-ಸಾಲ ನೀಡುವಿಕೆ, ಸಾಲದ ಮೂಲಗಳ ಆಯ್ಕೆ, ಸಾಲವಿಮೆ, ಸಾಲ ವಿತರಣೆ, ಸಂಗ್ರಹಣೆ ಮತ್ತು ಸಮನ್ವಯ ಪ್ರಕ್ರಿಯೆಗಳಿಗಾಗಿ ಕರ್ಣಾಟಕ ಬ್ಯಾಂಕ್ ಸುಲಭವಾಗಿ ಸಂಪರ್ಕ ಸಾಧಿಸಲು ಈ ಒಡಂಬಡಿಕೆಯು ಅನುವು ಮಾಡಿಕೊಡುತ್ತದೆ. ಸಾಲ ವಿತರಣೆಗಾಗಿ ಡಿಜಿಟಲ್ ಮೌಲ್ಯಮಾಪನ ಸಾಮರ್ಥ್ಯದಿಂದ ಸಾಲ ಪ್ರಕ್ರಿಯೆಯ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಮೂಲಕ, ಗ್ರಾಹಕರ ಅನುಭವವನ್ನು ಇನ್ನಷ್ಟು ಉತ್ತಮಗೊಳಿಸಲಿದೆ.ಈ ಒಪ್ಪಂದದ ಕುರಿತು ಮಾತನಾಡಿದ ಕರ್ಣಾಟಕ ಬ್ಯಾಂಕ್‌ನ ಎಂಡಿ ಹಾಗೂ ಸಿಇಒ ಶ್ರೀಕೃಷ್ಣನ್ ಎಚ್., nPOS ಪ್ಲಾಟ್‌ಫಾರ್ಮ್ ಮೂಲಕ ನಾರ್ದರ್ನ್ ಆರ್ಕ್‌ನೊಂದಿಗೆ ಕರ್ಣಾಟಕ ಬ್ಯಾಂಕಿನ ಒಡಂಬಡಿಕೆಯು ಅನೇಕ ಫಿನ್‌ಟೆಕ್‌ಗಳೊಂದಿಗೆ ಪಾಲುದಾರರಾಗಲು ವಿಪುಲ ಅವಕಾಶ ಒದಗಿಸಿದೆ. ಮುಂಗಡ ವಿಭಾಗದ ಬಲವರ್ಧನೆಗಾಗಿ ನಾವು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಇದರ ಭಾಗವಾಗಿ ನಾವು ಸಭಾಗಿತ್ವಕ್ಕಾಗಿ ಅನೇಕ ಕ್ಷೇತ್ರಗಳನ್ನು ನೋಡುತ್ತಿದ್ದೇವೆ. ನಾರ್ದರ್ನ್ ಆರ್ಕ್‌ನೊಂದಿಗಿನ ಸಂಬಂಧವು ವಿವಿಧ ಎನ್‌ಬಿಎಫ್‌ಸಿಗಳ ಮೂಲಕ ಬ್ಯಾಂಕಿಂಗ್ ವ್ಯವಹಾರವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎಲ್ಲಾ ಕಡೆ ವಿಸ್ತರಿಸಲು ನಮಗೆ ಸಹಾಯ ಮಾಡುತ್ತದೆ ಎಂದು ನುಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಫಿನ್‌ಟೆಕ್ ಕಂಪೆನಿಗಳೊಂದಿಗೆ ಬ್ಯಾಂಕ್ ಸಹಭಾಗಿತ್ವವನ್ನು ಹೊಂದಿದೆ. ಈ ಒಪ್ಪಂದವು ನಮ್ಮ ಡಿಜಿಟಲ್ ಪರಿವರ್ತನೆಯ ಪ್ರಯಾಣಕ್ಕೆ ಅನುಗುಣವಾಗಿದೆ. ಎಲ್ಲ ವಿಧದ ಗ್ರಾಹಕರನ್ನು ತಲುಪುವಲ್ಲಿ ಇದು ಬ್ಯಾಂಕಿಗೆ ಸಹಕಾರಿಯಾಗಿದೆ. ಈ ಒಡಂಬಡಿಕೆಯು ನಮ್ಮ ಬ್ಯಾಂಕಿನ ಸಾಲ ವಿಭಾಗಕ್ಕೆ ಉತ್ತೇಜನ ನೀಡಿ ಬ್ಯಾಂಕ್ ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಾಯ ಮಾಡುತ್ತದೆ ಎಂದು ಹೇಳಿದರು.ನಾರ್ದನ್ ಆರ್ಕ್ ಕ್ಯಾಪಿಟಲ್‌ನ ಎಂಡಿ ಹಾಗೂ ಸಿಇಒ ಆಶಿಶ್ ಮೆಹ್ರೋತ್ರಾ ಮಾತನಾಡಿ, ಕರ್ಣಾಟಕ ಬ್ಯಾಂಕ್‌ನ ಡಿಜಿಟಲ್ ಪರಿವರ್ತನೆಯ ಪ್ರಯಾಣದಲ್ಲಿ ಪಾಲುದಾರರಾಗಲು ನಾವು ಸಂತೋಷಪಡುತ್ತೇವೆ. ಬ್ಯಾಂಕಿಂಗ್ ರಂಗದಲ್ಲಿ ಡಿಜಿಟಲ್ ಸ್ಪರ್ಶವನ್ನು ಹೆಚ್ಚಿಸಿ, ಗ್ರಾಹಕರ ಅವಶ್ಯಕತೆಗಳಿಗೆ ವೇಗವಾಗಿ ಸ್ಪಂದಿಸಲು ಕರ್ಣಾಟಕ ಬ್ಯಾಂಕಿನ ಜೊತೆಗೆ ನಾವಿರಲು ಹೆಮ್ಮೆ ಪಡುತ್ತೇವೆ ಎಂದು ನುಡಿದರು.ಕರ್ಣಾಟಕ ಬ್ಯಾಂಕ್‌ನ ಕ್ರೆಡಿಟ್ ಮಾರ್ಕೆಟಿಂಗ್ ವಿಭಾಗದ ಜನರಲ್ ಮ್ಯಾನೆಜರ್ ವಿನಯ ಭಟ್ ಪಿ.ಜೆ ಮತ್ತು ಇತರ ಉನ್ನತ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ