ಕರ್ನಾಟಕ ಸಂಭ್ರಮ-50 ರಥಕ್ಕೆ ಹಿರೇಕೆರೂಲ್ಲಿ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Jul 04, 2024, 01:05 AM IST
ಪೋಟೊ ಶೀರ್ಷಿಕೆ: 3ಎಚ್‌ಕೆಅರ್ 1 ಹಿರೇಕೆರೂರ ಪಟ್ಟಣಕ್ಕೆ ಆಗಮಿಸಿದ ಕನ್ನಡ ಸಂಭ್ರಮ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. | Kannada Prabha

ಸಾರಾಂಶ

ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಹಿರೇಕೆರೂರು: ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಿಇಎಸ್ ವಿದ್ಯಾಸಂಸ್ಥೆಯ ಸಹಸ್ರಾರು ವಿದ್ಯಾರ್ಥಿಗಳು ಭವ್ಯ ಸ್ವಾಗತ ಕೋರಿದರು.

ಸಿಇಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್. ಪಾಟೀಲ್‌ ಮಾತನಾಡಿ, ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಪೂರೈಸಿದ ಪ್ರಯುಕ್ತ ಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ-50 ರಥ ಕನ್ನಡ ನಾಡು ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕನ್ನಡಿಗರಾದ ನಾವೆಲ್ಲರೂ ಒಂದೆ ಎಂಬ ಸೌಹಾರ್ದ ಸಂದೇಶ ಸಾರುವ ಈ ರಥವು ಕನ್ನಡತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಕರ್ನಾಟಕದ ಎಲ್ಲರ ಮನೆ ಮನ ಬೆಳಗಲಿದೆ. ಕನ್ನಡ ನಮ್ಮ ಉಸಿರು. ಸುಮಾರು 2000 ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕ ಸಾಂಸ್ಕೃತಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಭವ್ಯ ಪರಂಪರೆ ಹೊಂದಿದೆ. ಅಂತಹ ಭವ್ಯ ಪರಂಪರೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವುದೆ ಈ ಕರ್ನಾಟಕ ಸಂಭ್ರಮ-50ರ ಆಶಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್. ಸುರೇಶಕುಮಾರ ಮಾತನಾಡಿ, ವಿವಿಧ ಭಾಷೆಗಳ ಆಧಾರದಲ್ಲಿ ಹಂಚಿಹೋಗಿದ್ದ ಕನ್ನಡ ನೆಲವನ್ನೆಲ್ಲ ಒಗ್ಗೂಡಿಸುವ ಪ್ರಯತ್ನಕ್ಕೆ ಪ್ರೇರಕವಾಗಿ ಕನ್ನಡ, ಕನ್ನಡಿಗರಲ್ಲಿ ಏಕತೆ ಕಾಪಾಡಲು ಈ ಕನ್ನಡ ರಥ ಸಫಲವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾಕರ, ಪಪಂ ಮುಖ್ಯಾಧಿಕಾರಿ ಕೋಡಿ ಭೀಮ್‌ರಾಯ್, ಕನ್ನಡ ಸಾಹಿತ್ಯ ಅಭಿಮಾನಿಗಳಾದ ರಮೇಶ ಕೋಡಿಹಳ್ಳಿ, ಬಸವರಾಜ ಚಿಂದಿ, ರಾಮಣ್ಣ ತೆಂಬದ್, ಬಸವರಾಜ ಪೂಜಾರ, ಎಸ್.ಎಚ್‌. ನರಗುಂದಮಠ, ವೀರಣ್ಣ ಚಿಟ್ಟೂರು, ಬಿ.ಪಿ. ಹಳ್ಳೇರ, ಕೆ.ಆರ್. ಲಮಾಣಿ, ಆರ್.ಎಚ್. ಬೆಟ್ಟಳ್ಳೆರ್, ಆರ್.ಎಚ್. ಪೂಜಾರ, ಆರ್.ಎಂ. ಕರೆಗೌಡ್ರ, ಪಿ.ಎಂ. ಡಮ್ಮಳ್ಳಿ, ಸತೀಶ ಬಣಕಾರ, ಬಿ.ಎಸ್. ಪಾಟೀಲ್, ಜಿ.ಎಸ್. ಗಂಗಾಧರ, ಬಸವರಾಜ ಪುಜಾರ ಇದ್ದರು. ಸಹಸ್ರಾರು ವಿದ್ಯಾರ್ಥಿಗಳು ರಥಯಾತ್ರೆಗೆ ಮರುಗು ತಂದರು.

ಬ್ಯಾಡಗಿಯಲ್ಲಿ ಕನ್ನಡರಥಕ್ಕೆ ಸ್ವಾಗತಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ರಾಜ್ಯಾದ್ಯಂತ ಸಂಚಾರ ಮಾಡುತ್ತಿರುವ ಕನ್ನಡ ರಥ ಬ್ಯಾಡಗಿ ಪಟ್ಟಣಕ್ಕೆ ಆಗಮಿಸುವ ಸಂದರ್ಭದಲ್ಲಿ ತಾಲೂಕು ಆಡಳಿತದ ವತಿಯಿಂದ ರಥವನ್ನು ಮೋಟೆಬೆನ್ನೂರಿನಲ್ಲಿ ಸ್ವಾಗತಿಸಲಾಯಿತು.ಬಳಿಕ ಮಾತನಾಡಿದ ತಹಸೀಲ್ದಾರ್ ಫಿರೋಜ್-ಷಾ ಸೋಮನಕಟ್ಟಿ, ಮೈಸೂರು ರಾಜ್ಯ, ಕರ್ನಾಟಕವೆಂದು ನಾಮಕರಣಗೊಂಡು 50ನೇ ವರ್ಷಕ್ಕೆ ಪದಾರ್ಪಣೆ ಬೆನ್ನಲ್ಲೇ, ಕನ್ನಡ ನಾಡು-ನುಡಿ, ನೆಲ-ಜಲ ಮತ್ತು ನಮ್ಮ ಸಂಸ್ಕೃತಿ ಬಗ್ಗೆ ಅಭಿಮಾನ ಜಾಗ್ರತಗೊಳಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇಡೀ ರಾಜ್ಯಾದ್ಯಂತ ಕನ್ನಡ ತಾಯಿ ಭುವನೇಶ್ವರಿ ದೇವಿಯ ರಥಯಾತ್ರೆ ಆರಂಭಿಸಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಕನ್ನಡರಥವನ್ನು ಮೋಟೆಬೆನ್ನೂರು ಗ್ರಾಮದಲ್ಲಿ ಕನ್ನಡ ಅಭಿಮಾನಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಜಗಾಪುರ, ಮಲ್ಲಿಕಾರ್ಜುನ ಬಳ್ಳಾರಿ, ಸುರೇಶ ಅಂಗಡಿ, ಪಿಡಿಒ ಸತೀಶ ಮೂಡೇರ, ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ, ನೌಕರರ ಸಂಘದ ಅಧ್ಯಕ್ಷ ಎಂ.ಎಫ್. ಕರಿಯಣ್ಣನವರ ಹಾಗೂ ಕನ್ನಡಪರ ಸಂಘಟನೆಗಳ ಸದಸ್ಯರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!