ಮುಂಡರಗಿ: ದೇಶದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯವಾಗಿದೆ. ಅಲ್ಲದೇ ಜೀವವೈವಿಧ್ಯತೆಯ ಸ್ವರ್ಗವಾಗಿದ್ದು, ಏಕತೆಯನ್ನು ಪ್ರದರ್ಶಿಸುತ್ತದೆ ಎಂದು ಅನ್ನದಾನೀಶ್ವರ ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ತಿಳಿಸಿದರು.
ಪ್ರೊ. ಕಾವೇರಿ ಬೋಲಾ ಮಾತನಾಡಿ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಪ್ರಮುಖವಾಗಿರುವುದನ್ನು ಎಂದಿಗೂ ಮರೆಯುವಂತಿಲ್ಲ ಎಂದರು.
ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರೀಡಾ ವಿಭಾಗದ ಮುಖ್ಯೆಸ್ಥ ಡಾ. ಮನೋಜ್ ಕೋಪರ್ಡೆ ಅವರನ್ನು ಸನ್ಮಾನಿಸಲಾಯಿತು. ಸಮಿತಿ ಉಪಕಾರ್ಯಾಧ್ಯಕ್ಷ ವಿ.ಎಫ್. ಗುಡದಪ್ಪನವರ, ಟಿ.ಬಿ. ದಂಡಿನ, ಡಾ. ಅಮರೇಶ ಶಿವಶೆಟ್ಟಿ, ಶೌಕತ್ ಅಲಿ, ಸುರೇಶ ನ್ಯಾಮತಿ, ಡಾ. ಕುಮಾರ ಜೆ., ಡಾ. ವನಜಾಕ್ಷಿ ಭರಮಗೌಡರ, ಡಾ. ಆರ್.ಎಚ್. ಜಂಗಣವಾರಿ, ಡಾ. ಸಚಿನ್ ಉಪ್ಪಾರ ಇತರರು ಇದ್ದರು.ಪ್ರಾಚಾರ್ಯ ಡಾ. ಸಂತೋಷ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ನಂದಿತಾ ಟೆಂಕದ ಸ್ವಾಗತಿಸಿದರು. ಲಕ್ಷ್ಮೀ ಕನಕಪ್ಪನವರ ನಿರೂಪಿಸಿದರು. ಈರಮ್ಮ ಬಂಡಿವಡ್ಡರ ವಂದಿಸಿದರು.