ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

KannadaprabhaNewsNetwork |  
Published : Feb 17, 2024, 01:16 AM IST
ಎಚ್.ಕೆ.ಪಾಟೀಲ | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ಗದಗ: ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳು ಪ್ರಶಂಸೆಗೆ ಪಾತ್ರವಾಗಿರುವುದರಿಂದ ದಕ್ಷ ಮತ್ತು ಸಂಕಲ್ಪ ಶಕ್ತಿಯುಳ್ಳ ಕರ್ನಾಟಕ ಸರ್ಕಾರದ ಪ್ರಯತ್ನಗಳು ಕೈಗೂಡಿವೆ. ವಿರೋಧ ಪಕ್ಷಗಳ ಟೀಕೆಗೆ ಸರ್ಕಾರದ ಗ್ಯಾರಂಟಿಗಳ ಪರಿಣಾಮಕಾರಿ ಅನುಷ್ಠಾನವೇ ಗ್ಯಾರಂಟಿಯಾಗಿದೆ ಎಂದಿದ್ದಾರೆ.

ಗದಗ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 10 ಕೋಟಿಗಳ ವೆಚ್ಚದ ಶೀತಲಗೃಹ ನಿರ್ಮಾಣ ಮಾಡುವ ಮೂಲಕ ಹಣ್ಣು-ತರಕಾರಿ ಮಾರುಕಟ್ಟೆಗೆ ದೊಡ್ಡ ಬೆಂಬಲ ದೊರಕಲಿದೆ.

ಗದಗ ಜಿಲ್ಲೆಯ ಜಾಲವಾಡಗಿ ಏತ ನೀರಾವರಿಯನ್ನು 7.28 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು, ಶಿರಹಟ್ಟಿ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸಲು, ಗದಗ ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರು.10 ಕೋಟಿಗಳ ವೆಚ್ಚದಲ್ಲಿ ಕ್ಯಾತಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೇಷಾಲಿಟಿ ಕಾರ್ಡಿಯಾಕ್ ಯೂನಿಟ್ (Super Speciality Cardiac Unit) ಸ್ಥಾಪಿಸುವ ನಿರ್ಣಯ, ಗದಗದಲ್ಲಿ 450 ಹಾಸಿಗೆಯ ಆಸ್ಪತ್ರೆಗೆ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣ ಖರೀದಿಗೆ ಹಣ ಒದಗಿಸಿರುವುದು, ಗದಗದಲ್ಲಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ನಿರ್ಣಯಿಸಲಾಗಿರುವುದು, ಗದಗ ಜಿಲ್ಲೆಯ ಕಪ್ಪತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮ ಉತ್ತೇಜಿಸಿರುವುದು, ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹೊಸ ಜಿ.ಟಿ.ಟಿ.ಸಿ ಪ್ರಾರಂಭಿಸುವ ಮೂಲಕ, ರೋಣದ ಮಲ್ಲಾಪುರ ರೈಲ್ವೆ ಮೇಲುಸೇತುವೆ ಕಾಮಗಾರಿ ಘೋಷಿಸಿರುವುದು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ವದ ಮತ್ತು ಪರಿಣಾಮಕಾರಿಯಾದ ಅಭಿವೃದ್ಧಿಯ ಶಕೆಯನ್ನು ಪುನರಾರಂಭಿಸುವ ದಿಕ್ಸೂಚಿಯಾಗಿವೆ ಎಂದು ಸಚಿವ ಪ್ರತಿಕ್ರಿಯೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಳ್ಳತನಕ್ಕೆ ಹೋದಾಗ ಹಲ್ಲೆ ಮಾಡಿದ್ದಾರೆಂದು ಕೇಸ್‌
ಫೆ.9ರಿಂದ ಮೆಟ್ರೋ ದರ ಮತ್ತಷ್ಟು ದುಬಾರಿ