ಶಬರಿಮಲೆ ಯಾತ್ರಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

KannadaprabhaNewsNetwork |  
Published : Jan 18, 2026, 01:45 AM IST
ಕನ್ನಡಿಗ ಶಬರಿ ಮಲೆ ಯಾತಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ | Kannada Prabha

ಸಾರಾಂಶ

ಯಾತ್ರಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಬಾವುಟ ಕಿತ್ತು ಹಾಕಿದ ಕಿಡಿಗೇಡಿಗಳ ಮೇಲೆ ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕನ್ನಡಿಗರು ಪ್ರತಿಭಟನೆ ತೀವ್ರ ಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಬಳಿಕ ತಹಸೀಲ್ದಾರ್‌ ಎಂ.ಎಸ್.‌ತನ್ಮಯ್‌ಗೆ ಮನವಿ ಸಲ್ಲಿಸಿದರು.

ಗುಂಡ್ಲುಪೇಟೆ: ತಮಿಳುನಾಡಿನಲ್ಲಿ ಕೆಲ ಕಿಡಿಗೇಡಿಗಳು ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿದ್ದ ವಾಹನ ತಡೆದು ರಂಪಾಟ ನಡೆಸಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸಾರಿಗೆ ಬಸ್‌ ನಿಲ್ದಾಣದ ಮುಂದೆ ರಸ್ತೆ ತಡೆ ನಡೆಸಿ ತಮಿಳಿಗರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕೇರಳ ಪ್ರವಾಸ ಮುಗಿಸಿದ್ದ ರಾಜ್ಯದ ಶಬರಿ ಮಲೆ ಯಾತ್ರಿಗಳು ತಮಿಳು ನಾಡಿಗೆ ತೆರಳಿದ್ದ ಸಮಯದಲ್ಲಿ ಅಲ್ಲಿನ ಕೆಲವರು ಕನ್ನಡಿಗರ ವಾಹನದ ಮೇಲಿದ್ದ ಕನ್ನಡ ಬಾವುಟ ತೆರವುಗೊಳಿಸಿದ್ದಲ್ಲದೆ ಹಲ್ಲೆಯನ್ನೂ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ ತಮಿಳುನಾಡಿನ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿದರು.

ಯಾತ್ರಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಬಾವುಟ ಕಿತ್ತು ಹಾಕಿದ ಕಿಡಿಗೇಡಿಗಳ ಮೇಲೆ ತಮಿಳುನಾಡು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕನ್ನಡಿಗರು ಪ್ರತಿಭಟನೆ ತೀವ್ರ ಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಬಳಿಕ ತಹಸೀಲ್ದಾರ್‌ ಎಂ.ಎಸ್.‌ತನ್ಮಯ್‌ಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರವೇ ಮಾಧು, ರಾಜೇಂದ್ರ ನಾಯಕ್‌, ರಮೇಶ್‌ ನಾಯಕ್‌, ನಾಗರಾಜು, ಜವರಶೆಟ್ಟಿ, ವಸಂತ, ಮಂಜುನಾಥ್‌ ಸೇರಿ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ