ಕನ್ನಡಪ್ರಭ ವಾರ್ತೆ ನವದೆಹಲಿ
ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಸಂಜೆ ನಡೆದ ರಾಯಭಾರಿಗಳು ಹಾಗೂ ಹೈ ಕಮಿಷನರ್ಗಳ ಜತೆಗಿನ ‘ಬ್ರಿಡ್ಜ್ ಟು ಬೆಂಗಳೂರು’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 16,000ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು, 550ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳು ಮತ್ತು ಎಐ, ಬಯೋಟೆಕ್, ಬಾಹ್ಯಾಕಾಶ ಮತ್ತು ಕ್ವಾಂಟಮ್ ಪರಿಸರ ವ್ಯವಸ್ಥೆಗಳಲ್ಲಿ ಮುಂಚೂಣಿಯಲ್ಲಿರುವ ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕ ಹೊರಹೊಮ್ಮಿದೆ ಎಂದು ಪ್ರತಿಪಾದಿಸಿದ ಸಿಎಂ, ರಾಜ್ಯದ ಪ್ರಗತಿಗೆ ಸರ್ಕಾರದೊಂದಿಗೆ ಸೇರಲು ಜಾಗತಿಕ ಪಾಲುದಾರರನ್ನು ಆಹ್ವಾನಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕರ್ನಾಟಕವು ಜಾಗತಿಕ ನಾವೀನ್ಯತಾ ಕೇಂದ್ರ ಮತ್ತು ಹೂಡಿಕೆಯ ಆದ್ಯತಾ ತಾಣವಾಗಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಬೆಂಗಳೂರು ಕೇವಲ ಭೇಟಿ ನೀಡುವ ನಗರವಲ್ಲ. ಕನಸುಗಳನ್ನು ಕಟ್ಟಿಕೊಳ್ಳುವ, ಭವಿಷ್ಯ ರೂಪಿಸುವ ನಗರವಾಗಿದೆ. ಎಲ್ಲರನ್ನೂ, ಎಲ್ಲದನ್ನೂ ಸ್ವಾಗತಿಸುವ ಅದರ ಮುಕ್ತ ಧೋರಣೆ, ಸದೃಢ ಪರಿಸರ ವ್ಯವಸ್ಥೆ ಮತ್ತು ಉತ್ತಮ ಜೀವನಮಟ್ಟದಿಂದ ಕೂಡಿದ ಜಾಗತಿಕ ಪ್ರತಿಭೆ, ನಾವೀನ್ಯತೆ ಹಾಗೂ ಹೂಡಿಕೆಗಳನ್ನು ನಿರಂತರವಾಗಿ ಸೆಳೆಯುತ್ತಾ, ಅವಕಾಶಗಳ ನಗರವಾಗಿ ಮುಂದುವರಿಯುತ್ತಿದೆ ಎಂದರು.ಸಮಾವೇಶದಲ್ಲಿ ಮಾತನಾಡಿದ ರಾಜತಾಂತ್ರಿಕರು, ‘ಬ್ರಿಡ್ಜ್ ಟು ಬೆಂಗಳೂರುʼ ಉಪಕ್ರಮದ ಮೂಲಕ ರಾಜ್ಯ ಸರ್ಕಾರ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಚನಾತ್ಮಕವಾಗಿ ಕಾರ್ಯೋನ್ಮುಖವಾಗಿರುವುದನ್ನು ಶ್ಲಾಘಿಸಿದರು.