ರಾಜ್ಯದ 34 ರೈಲ್ವೆ ನಿಲ್ದಾಣಗಳಲ್ಲಿ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Feb 27, 2024, 01:39 AM ISTUpdated : Feb 27, 2024, 01:04 PM IST
ರೈಲ್ವೆ ಕಾಮಗಾರಿ | Kannada Prabha

ಸಾರಾಂಶ

ಭಾರತೀಯ ರೇಲ್ವೆಯ ಅಮೃತ ಭಾರತ ಯೋಜನೆಯಡಿ ರಾಜ್ಯದ 34 ರೈಲ್ವೆ ನಿಲ್ದಾಣಗಳು ಪುನರಾಭಿವೃದ್ಧಿಗೆ ಆಯ್ಕೆಯಾಗಿದ್ದು, ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ದೇಶಾದ್ಯಂತ ಅಮೃತ ಭಾರತ ಸ್ಟೇಷನ್‌ ಯೋಜನೆಯಡಿ 554 ರೈಲ್ವೆ ನಿಲ್ದಾಣಗಳು ಹಾಗೂ 1500 ರಸ್ತೆ ಮೇಲ್ಸೇತುವೆ ಹಾಗೂ ರಸ್ತೆ ಕೇಳಸೇತುವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 

ಈ ಪೈಕಿ ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯ ಮೂರು ವಿಭಾಗ ಸೇರಿ ₹1192.86 ಕೋಟಿ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

ನೈರುತ್ಯ ರೈಲ್ವೆ ವಲಯದ 34 ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್‌ ಯೋಜನೆಯಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಹುಬ್ಬಳ್ಳಿ ವಿಭಾಗ- 7 ನಿಲ್ದಾಣ: ಆಲಮಟ್ಟಿ, ಬಾದಾಮಿ, ಬಾಗಲಕೋಟೆ, ವಿಜಯಪುರ, ಮುನಿರಾಬಾದ್‌, ಸ್ಯಾನ್ವೋರ್ಡೆಮ್‌, ವಾಸ್ಕೋ ಡಿ ಗಾಮಾ.

ಬೆಂಗಳೂರು ವಿಭಾಗ- 15 ನಿಲ್ದಾಣ: ತುಮಕೂರು, ವೈಟ್‌ಫೀಲ್ಡ್‌, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ಹೊಸೂರ, ದೊಡ್ಡಬಳ್ಳಾಪುರ, ಹಿಂದೂಪುರ, ಕೆಂಗೇರಿ, ಕೃಷ್ಣರಾಜಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ರಾಮನಗರ.

ಮೈಸೂರು ವಿಭಾಗ- 12 ನಿಲ್ದಾಣ:ಸಾಗರ ಜಂಬಗಾರು, ಸಕಲೇಶಪುರ, ಶಿವಮೊಗ್ಗ ಟೌನ್‌, ಸುಬ್ರಹ್ಮಣ್ಯ ರೋಡ್‌, ತಾಳಗುಪ್ಪ, ತಿಪಟೂರು, ಬಂಟ್ವಾಳ, ಚಾಮರಾಜನಗರ, ಚಿಕ್ಕಮಗಳೂರ, ಹಾಸನ, ಚಿತ್ರದುರ್ಗ, ರಾಣಿಬೆನ್ನೂರು.

ಮೇಲ್ಸೇತುವೆ- ಕೆಳಸೇತುವೆ: ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ನಿರ್ಮಿಸಲಾದ ₹112.27 ಕೋಟಿ ವೆಚ್ಚದ 15 ರೈಲ್ವೆ ಕೆಳಸೇತುವೆ, 7 ಮೇಲ್ಸೇತುವೆ ಸೇರಿದಂತೆ 22 ಸೇತುವೆಗಳನ್ನು ಲೋಕಾರ್ಪಣೆ ಮಾಡಲಾಗಿದೆ.

 ₹278.64 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 7 ರೈಲ್ವೆ ಕೆಳಸೇತುವೆ, 1 ಮೇಲ್ಸೇತುವೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ