- ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ
----
ಕನ್ನಡಪ್ರಭ ವಾರ್ತೆ ಮೈಸೂರುನಮ್ಮ ದೇಶವನ್ನು, ರಾಜ್ಯವನ್ನು ರಕ್ಷಣೆ ಮಾಡಲು ಸಮಾಜವನ್ನು ಸದೃಢವಾಗಿ ಬೇಳೆಸಬೇಕಾದರೆ ಮಕ್ಕಳನ್ನು ರಕ್ಷಣೆ ಮಾಡಬೇಕು. ಮಕ್ಕಳ ರಕ್ಷಣೆಯನ್ನು ಮಾಡಿದಾಗ ನಾವು ಮುಂದಿನ ಭವಿಷ್ಯವನ್ನು ವಿಚಾರ ಮಾಡಲು ಸಾಧ್ಯ. ಹೀಗಾಗಿ, ಮಕ್ಕಳ ರಕ್ಷಣೆಗೆ ಪ್ರಬಲ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.
ಮಕ್ಕಳ ಏಳಿಗೆ ಕುರಿತು ನಾವು ಜವಾಬ್ದಾರಿಯುತವಾಗಿ ಮಕ್ಕಳ ರಕ್ಷಣೆ ಮತ್ತು ನಿರ್ವಹಣೆ ಮಾಡಬೇಕು. ಅರಿವೇ ಗುರು ಎನ್ನುತ್ತಾ ಮಕ್ಕಳಿಗೆ ಬಾಲ್ಯದಲ್ಲಿಯೇ ನೈತಿಕತೆ, ಆಚಾರ ವಿಚಾರಗಳು, ಸಂಪ್ರದಾಯದ ಬಗ್ಗೆ ತಿಳಿಸಿದರೆ ದೇಶವನ್ನು ಮುನ್ನಡೆಸಲು ಸಹಕಾರಿಯಾಗುತ್ತದೆ. ಮಕ್ಕಳನ್ನು ಬೆಳೆಸುವಲ್ಲಿ ನಮ್ಮ ನಮ್ಮ ಜವಾಬ್ದಾರಿಗಳನ್ನೂ ಸಹ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಮಕ್ಕಳ ಹಕ್ಕುಗಳು, ಬಾಲ್ಯವಿವಾಹ, ಮಕ್ಕಳ ಶಿಕ್ಷಣದ ಕುರಿತು ಪೋಷಕರಿಗೆ ಹಾಗೂ ಅಧಿಕಾರಿಗಳಿಗೆ ಅರಿವು ಮೂಡಿಸಬೇಕು. ಮೈಸೂರು ಇತ್ತೀಚಿಗೆ ಅತಿ ವೇಗದಲ್ಲಿ ನಗರೀಕರಣಕ್ಕೆ ಒಳಗಾಗುತ್ತಿದೆ. ಆದರೆ ಇನ್ನೂ ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳ ಬಾಲ್ಯ ವಿವಾಹ ನಡೆಯುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್ ಮಾತನಾಡಿ, ಇಂಡಿಯನ್ ಮೆಜಾರಿಟಿ ಕಾಯಿದೆ ಮತ್ತು ಪೋಕ್ಸೋ ಕಾಯಿದೆ ಪ್ರಕಾರ 18 ವರ್ಷದೊಳಗಿನ ಎಲ್ಲರೂ ಮಕ್ಕಳೇ ಎಂದು ಪರಿಗಣಿಸಲಾಗುತ್ತದೆ. ಮಕ್ಕಳಿಗೆ ಪೌಷ್ಟಿಕ ಆಹಾರವನ್ನೂ ಪಡೆಯುವ ಹಕ್ಕು, 6 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಶಿಕ್ಷಣ ಕಡ್ಡಾಯವಾದುದ್ದು, ಇಂದಿನ ಮಕ್ಕಳೇ ಮುಂದಿನ ಭವಿಷ್ಯದ ಆಸ್ತಿ ಎಂದು ತಿಳಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್. ಮಂಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ಸುರೇಶ್, ಜಿಲ್ಲಾ ಮಕ್ಕಳಾ ರಕ್ಷಣಾಧಿಕಾರಿ ಎನ್.ಟಿ. ಯೋಗೇಶ್, ರಾಜ್ಯ ಮುಕ್ತ ವಿವಿ ಸಹಾಯಕ ಪ್ರಾಧ್ಯಾಪಕ ಡಾ.ಸಿ. ಅನಿತ, ಪೋಲಿಸ್ ತರಬೇತುದಾರರಾದ ಸಿ.ಜೆ. ರೋಹಿತ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಾಂಡು ಮೊದಲಾದವರು ಇದ್ದರು.
ಕೋಟ್...
- ಡಾ.ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ