ಕಾರ್ಯಾಚರಣೆಯಲ್ಲಿನ ಸುಧಾರಣೆ : ರಾಜ್ಯದ ಎರಡು ಗ್ರಾಮೀಣ ಬ್ಯಾಂಕ್‌ ಮೇ1ಕ್ಕೆ ವಿಲೀನ

KannadaprabhaNewsNetwork |  
Published : Apr 09, 2025, 12:33 AM ISTUpdated : Apr 09, 2025, 06:11 AM IST
ಕರ್ನಾಟಕ ಗ್ರಾಮೀಣ ಬ್ಯಾಂಕ್‌ | Kannada Prabha

ಸಾರಾಂಶ

ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಾಚರಣೆಯಲ್ಲಿನ ಸುಧಾರಣೆ ಉದ್ದೇಶದಿಂದ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ (ಆರ್‌ಆರ್‌ಬಿ)’ ಯೋಜನೆ ಮೇ 1ರಿಂದಲೇ ಅನುಷ್ಠಾನಕ್ಕೆ ಬರಲಿದೆ. ಅದರಂತೆ ಕರ್ನಾಟಕ 2 ಗ್ರಾಮೀಣ ಬ್ಯಾಂಕ್‌ಗಳು ಇನ್ನು ಒಂದಾಗಲಿವೆ.  

 ನವದೆಹಲಿ: ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಾಚರಣೆಯಲ್ಲಿನ ಸುಧಾರಣೆ ಉದ್ದೇಶದಿಂದ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ (ಆರ್‌ಆರ್‌ಬಿ)’ ಯೋಜನೆ ಮೇ 1ರಿಂದಲೇ ಅನುಷ್ಠಾನಕ್ಕೆ ಬರಲಿದೆ. ಅದರಂತೆ ಕರ್ನಾಟಕ 2 ಗ್ರಾಮೀಣ ಬ್ಯಾಂಕ್‌ಗಳು ಇನ್ನು ಒಂದಾಗಲಿವೆ. ಒಟ್ಟಾರೆ ಕರ್ನಾಟಕ ಸೇರಿ 11 ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚಿರುವ 15 ಗ್ರಾಮೀಣ ಬ್ಯಾಂಕ್‌ಗಳು ವಿಲೀನಗೊಳ್ಳಲಿವೆ.

ಕರ್ನಾಟಕದಲ್ಲಿ ಇದೀಗ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಎಂಬ 2 ಆರ್‌ಆರ್‌ಬಿಗಳು ಕಾರ್ಯಾಚರಣೆ ನಡೆಸುತ್ತಿವೆ. ಮೇ ತಿಂಗಳ ಆರಂಭದಿಂದಲೇ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನೊಂದಿಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವಿಲೀನಗೊಳ್ಳಲಿದೆ. ಕೆನರಾ ಬ್ಯಾಂಕ್‌ ಈ ಬ್ಯಾಂಕ್‌ನ ಪ್ರಾಯೋಜಕತ್ವ ಬ್ಯಾಂಕ್‌ ಆಗಿರಲಿದೆ.

ಈ ವಿಲೀನ ಪ್ರಕ್ರಿಯೆಯ ಬಳಿಕ ದೇಶದಲ್ಲಿ ಹಾಲಿ ಇರುವ 43 ಗ್ರಾಮೀಣ ಬ್ಯಾಂಕ್‌ಗಳ ಸಂಖ್ಯೆ ಮುಂದಿನ ತಿಂಗಳಿಂದ 28ಕ್ಕಿಳಿಯಲಿದೆ.

ಗ್ರಾಮೀಣ ಬ್ಯಾಂಕ್‌ಗಳಲ್ಲಿನ ಕಾರ್ಯಚಟುವಟಿಕೆಯಲ್ಲಿ ದಕ್ಷತೆ ಮತ್ತು ವೆಚ್ಚ ಕಡಿತದ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿಂದೆಯೂ ಗ್ರಾಮೀಣ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಡೆದಿದ್ದು, ಇದು ನಾಲ್ಕನೇ ಹಂತದ ವಿಲೀನ ಪ್ರಕ್ರಿಯೆ ಆಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''