ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು ಮತ್ತಷ್ಟು ಪ್ರೋತ್ಸಾಹ ಅವಶ್ಯಕ

KannadaprabhaNewsNetwork |  
Published : Mar 10, 2025, 01:36 AM ISTUpdated : Mar 10, 2025, 07:56 AM IST
33 | Kannada Prabha

ಸಾರಾಂಶ

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು, ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ ಎಂದು ಬಸವಮಾರ್ಗ ಸಂಸ್ಥೆಯ ಸಂಸ್ಥಾಪಕ ಎಸ್. ಬಸವಣ್ಣ ತಿಳಿಸಿದರು.

  ಮೈಸೂರು : ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು, ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ ಎಂದು ಬಸವಮಾರ್ಗ ಸಂಸ್ಥೆಯ ಸಂಸ್ಥಾಪಕ ಎಸ್. ಬಸವಣ್ಣ ತಿಳಿಸಿದರು.

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ಮೈಸೂರು ವಿವಿ ದೈಹಿಕ ‌ಶಿಕ್ಷಣ ವಿಭಾಗದ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ ಭಾನುವಾರ ಆಯೋಜಿಸಿದ್ದ ಆಸ್ಮಿತ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಪುರುಷನ ಯಶಸ್ಸಿನ‌ ಹಿಂದೆ ಒಬ್ಬ ಮಹಿಳೆ ಇದ್ದೇ ಇರುತ್ತಾರೆ. ಮಹಿಳೆ ಇಂದು ನಾಲ್ಕು ಚೌಕಟ್ಟಿಗೆ ಸೀಮಿತಳಾಗದೆ ಎಲ್ಲಾ ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ತೋರಿದ್ದಾರೆ ಎಂದರು.

ವಿಜ್ಞಾನ, ತಂತ್ರಜ್ಞಾನ, ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಯೋಗವೂ ಪ್ರತಿಯೊಬ್ಬರಲ್ಲೂ ಬದಲಾವಣೆ ತರುತ್ತದೆ. ಅದರಲ್ಲೂ ಮಹಿಳೆಯರಿಗೆ ಯೋಗಾ ಅತ್ಯಗತ್ಯ. ಬೆಳಗ್ಗೆಯಿಂದ ಸಂಜೆಯವರೆಗೆ ಮನೆಯ ಎಲ್ಲಾ ಕೆಲಸವನ್ನು ನಿಭಾಯಿಸುವ ಹಾಗೂ ಹೊರಗೆ ದುಡಿಯುತ್ತಿರುವ ಮಹಿಳೆಯರ ಆರೋಗ್ಯವೂ ಮುಖ್ಯ. ಈ ನಿಟ್ಟಿನಲ್ಲಿ ಯೋಗ, ಧ್ಯಾನ, ಪ್ರಾಣಾಯಾಮಗಳನ್ನ ನಿತ್ಯ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅದನ್ನು ಹಂಚುತ್ತಾ ಹೋಗಬೇಕು ಎಂದು ಅವರು ಸಲಹೆ ನೀಡಿದರು.

ಶಾಲಾ ಕಾಲೇಜುಗಳಲ್ಲಿ ಯೋಗ ಕಡ್ಡಾಯಗೊಳಿಸಿ

ಮಾಜಿ ‌ಮೇಯರ್ ಪುರುಷೋತ್ತಮ್ ಮಾತನಾಡಿ, ಯೋಗ ಎಲ್ಲಾ ಕ್ರೀಡೆಗಳ ಗುರು. ಯೋಗವನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು. ಶಾಲಾ ಕಾಲೇಜುಗಳಲ್ಲಿ ಯೋಗವನ್ನು ಕಡ್ಡಾಯಗೊಳಿಸಿ, ನಿತ್ಯ ಒಂದು ಗಂಟೆ ಅದಕ್ಕೆಂದೆ ಮೀಸಲಿಡಬೇಕು ಎಂದರು.

ಭಾರತ ಇಡೀ ವಿಶ್ವಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿತು. ಆದರೆ, ಭಾರತದಲ್ಲಿ ಶೆ.70 ಜನರು ಯಾವುದಾದರೊಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಪ್ರತಿಯೊಬ್ಬರೂ ಯೋಗ ಮಾಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬೇಕು ಎಂದು‌ ಅವರು ಸಲಹೆ ನೀಡಿದರು.

ರಿಯೋ ಮೆರಿಡಿಯನ್ ಹೊಟೇಲ್‌ ನಿರ್ದೇಶಕಿ ಮಾಲೀನಿ ಪ್ರವೀಣ್, ರಾಷ್ಟ್ರೀಯ ಕ್ರೀಡಾಪಟು ರೀನಾ ಜಾರ್ಜ್, ಸಂಗೀತಾ ಕಲಾವಿದೆ ಎಂ.ಅರ್. ಶೀಲಾ, ಕರ್ನಾಟಕ ಯೋಗಾಸನ ಅಸೋಸಿಯೇಶನ್ ಖಜಾಂಚಿ ಎನ್. ಆಶಾದೇವಿ, ಎ.ಜಿ.ಕೆ. ಜಯಪ್ರಕಾಶ್, ಉಪಾಧ್ಯಾಕ್ಷ ಬಿ. ರವಿ, ಕಾರ್ಯದರ್ಶಿ ಎಚ್.ಎಂ. ರವಣೀಕರ್, ಉಮಾ ಮೊದಲಾದವರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌