‘ಕೋಸ್ಟಲ್‌ ಕಿಂಗ್ಸ್‌ ಮಂಗಳೂರು’ ತಂಡ ನಾಯಕ ಕರುಣ್‌ ನಾಯರ್‌

KannadaprabhaNewsNetwork |  
Published : Jun 15, 2026, 03:45 AM IST
ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ಜೆರ್ಸಿ ಅನಾವರಣ ಮಾಡಲಾಯಿತು | Kannada Prabha

ಸಾರಾಂಶ

ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಆಶ್ರಯದಲ್ಲಿ ನಡೆಯುವ ಪ್ರೀಮಿಯರ್‌ ಟಿ20 ಕ್ರಿಕೆಟ್‌ ಟೂರ್ನಮೆಂಟ್‌ ‘ಮಹಾರಾಜ ಟ್ರೋಫಿ’ಯಲ್ಲಿ ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ನಾಯಕನಾಗಿ ಕರುಣ್‌ ನಾಯರ್‌ ಮತ್ತು ಉಪನಾಯಕನಾಗಿ ಶ್ರೇಯಸ್‌ ಗೋಪಾಲ್‌ ಆಯ್ಕೆಯಾಗಿದ್ದಾರೆ.

ಮಂಗಳೂರು: ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಆಶ್ರಯದಲ್ಲಿ ನಡೆಯುವ ಪ್ರೀಮಿಯರ್‌ ಟಿ20 ಕ್ರಿಕೆಟ್‌ ಟೂರ್ನಮೆಂಟ್‌ ‘ಮಹಾರಾಜ ಟ್ರೋಫಿ’ಯಲ್ಲಿ ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ನಾಯಕನಾಗಿ ಕರುಣ್‌ ನಾಯರ್‌ ಮತ್ತು ಉಪನಾಯಕನಾಗಿ ಶ್ರೇಯಸ್‌ ಗೋಪಾಲ್‌ ಆಯ್ಕೆಯಾಗಿದ್ದಾರೆ.

ಭಾನುವಾರ ಮಂಗಳೂರಿನ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಕೆಎಸ್‌ಸಿಎ ಆಶ್ರಯದಲ್ಲಿ ನಡೆದ ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ಜೆರ್ಸಿ ಅನಾವರಣ ಮತ್ತು ಟೀಂ ಆಂತಮ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಾಯಕ ಮತ್ತು ಉಪನಾಯಕರನ್ನು ಘೋಷಿಸಲಾಯಿತು.

ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ನಾಯಕನಾಗಿರುವ ಕರುಣ್‌ ನಾಯರ್‌ ಅವರು ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ 18 ಲಕ್ಷ ರು.ಗೆ ತಂಡಕ್ಕೆ ಆಯ್ಕೆಯಾಗುವ ಮೂಲಕ ದುಬಾರಿ ಆಟಗಾರರಾಗಿದ್ದಾರೆ. ಜೂ.20ರಿಂದ ಜು.12ರ ವರೆಗೆ ಮಹಾರಾಜ ಟ್ರೋಫಿ ಪಂದ್ಯಗಳು ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯ ಮೈದಾನಗಳಲ್ಲಿ ನಡೆಯಲಿದೆ. ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದ ಮಾಲೀಕತ್ವವನ್ನು ಮಾನ್ಯತಾ ಡೆವಲಪ​ರ್ಸ್ ಪಡೆದುಕೊಂಡಿದೆ.

ಕರ್ನಾಟಕ ಸ್ಟೇಟ್‌ ಕ್ರಿಕೆಟ್‌ ಅಸೋಸಿಯೇಶನ್‌ (ಕೆಎಸ್‌ಸಿಎ) ಮಂಗಳೂರು ವಲಯದ ಅಧ್ಯಕ್ಷ ಡಾ.ಶ್ರೀಕಾಂತ್‌ ರೈ ಮಾತನಾಡಿ, ತಳಮಟ್ಟದಿಂದ ಕ್ರಿಕೆಟ್‌ ಉತ್ತೇಜಿಸುವ ಹಾಗೂ ಯುವ ಪ್ರತಿಭೆಗಳನ್ನು ಬೆಳೆಸುವ ಸಲುವಾಗಿ ಮುಂದಿನ ದಿನಗಳಲ್ಲಿ ಶಾಲಾ ಮಟ್ಟದಲ್ಲೇ ಕ್ರಿಕೆಟ್‌ ಆಯೋಜಿಸುವ ಕುರಿತು ಕೆಎಸ್‌ಸಿಎ ಚಿಂತನೆ ನಡೆಸುತ್ತಿದೆ. ಎಂದರು.

ನಟ, ನಿರ್ದೇಶಕ ರೂಪೇಶ್‌ ಶೆಟ್ಟಿ ಮಾತನಾಡಿ, ಕೆ.ಎಲ್‌.ರಾಹುಲ್ ಕ್ರಿಕೆಟ್‌ ಕ್ಷೇತ್ರದಲ್ಲಿ ಮಂಗಳೂರಿಗರಿಗೆ ಮಾದರಿ. ಅವರಂತಹ ಪ್ರತಿಭೆಗಳು ಇಲ್ಲಿಂದ ಮೂಡಿಬರಬೇಕು ಎಂಬುದೇ ನಮ್ಮ ಉದ್ದೇಶ ಎಂದರು.

ಕೆಎಸ್‌ಸಿಎ ಖಜಾಂಜಿ ಬಿಎನ್‌ ಮಧುಕರ್‌, ಕೆಎಸ್‌ಸಿಎ ಅವಿನಾಶ್‌ ವೈದ್ಯ, ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ಟೀಮ್‌ ಓನರ್‌ ವಿನೋದ್‌ ನಾಯ್ಡು ಮತ್ತಿತರರು ಇದ್ದರು. ಶರ್ಮಿಳಾ ಸ್ವಾಗತಿಸಿ, ನಿರೂಪಿಸಿದರು.

ತಂಡದ ಆಟಗಾರರು: ಕೋಸ್ಟಲ್‌ ಕಿಂಗ್ಸ್‌ ಮಂಗಳೂರು ತಂಡದಲ್ಲಿ ಕರುಣ್‌ ನಾಯರ್‌ (ನಾಯಕ), ಶ್ರೇಯಸ್‌ ಗೋಪಾಲ್‌ (ಉಪ ನಾಯಕ), ಧೀರಜ್‌ ಜೆ.ಗೌಡ, ಎಸ್‌ಜೆ ನಿಕಿನ್‌ ಜೋಸ್‌, ಸೂರಜ್‌ ಅಹುಜಾ, ವೆಂಕಟೇಶ್‌ ಎಂ., ಆದರ್ಶ್‌ ಎಸ್‌ಜೆ, ಕುಶಾಲ್‌ ಎಂ ವಾಧ್ವಾನಿ, ಸಿದ್ಧಾರ್ಥ್‌ ಅಖಿಲ್‌, ರಾಜ್ವಿರ್‌ ವಾಧ್ವಾ, ಅನ್ವಯ್‌ ದ್ರಾವಿಡ್‌, ಸಂತೋಖ್‌ ಸಿಂಗ್‌, ಕಾರ್ತಿಕ್ ಸಿಎ, ಕೌಶಿಕ್‌ ವಿ., ಪೃಥ್ವಿರಾಜ್‌ ಶೇಖವತ್‌, ಆರ್ಯ ಜೆ.ಗೌಡ, ಆರೋನ್‌ ಸಿರಿಲ್‌ ಕ್ರಿಸ್ಟಿ, ರತನ್‌ ಬಿ.ಆರ್‌. ಸ್ಥಾನ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗ: ವಿಷ್ಣುಪ್ರದೀಪ್
ದಕ್ಷ್‌ ಹೆತ್ತವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸಾಂತ್ವನ