ಎಂಇಎಸ್ ವಿರುದ್ಧ ಕರುನಾಡ ವಿಜಯಸೇನೆ ಪ್ರತಿಭಟನೆ

KannadaprabhaNewsNetwork |  
Published : Jan 19, 2024, 01:45 AM IST
ಫೋಟೋ ವಿವರಣೆ : ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರರಿಗೆ ಕೊಲೆ ಬೆದರಿಕೆ ಹಾಕಿರುವ ಎಂ.ಇ.ಎಸ್. ಪುಂಡರನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಕರುನಾಡ ವಿಜಯಸೇನೆಯಿಂದ ಪ್ರತಿಭಟನೆ. | Kannada Prabha

ಸಾರಾಂಶ

ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ಕನ್ನಡ ಪರ ಹೋರಾಟಗಾರರಾದ ಅನಿಲ್ ದಡ್ಡಮನಿ, ಸಂಪತ್‍ ಕುಮಾರ್ ಇವರುಗಳಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗ: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ಕನ್ನಡ ಪರ ಹೋರಾಟಗಾರರಾದ ಅನಿಲ್ ದಡ್ಡಮನಿ, ಸಂಪತ್‍ ಕುಮಾರ್ ಇವರುಗಳಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಹಾರಾಷ್ಟ್ರದ ಗಡಿಭಾಗದಲ್ಲಿರುವ ಬೆಳಗಾವಿಯಲ್ಲಿ ಮರಾಠಿ ಎಂಇಎಸ್‌ ಅವರು ಕನ್ನಡ ಪರ ಹೋರಾಟಗಾರರನ್ನು ಪದೆ ಪದೆ ಅವಮಾನಿಸುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅನಿಲ್‍ ದಡ್ಡಮನಿ, ಸಂಪತ್‍ ಕುಮಾರ್‌ಗೆ ಇನ್‍ಸ್ಟಾಗ್ರಾಂನಲ್ಲಿ ಕೊಲೆ ಬೆದರಿಕೆ ಹಾಕಿರುವವರನ್ನು ಕೂಡಲೆ ಬಂಧಿಸಿ ಎಂಇಎಸ್‌ ಅನ್ನು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರುನಾಡ ವಿಜಯಸೇನೆಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ 3 ಪಕ್ಷಗಳು ಮರಾಠಿಗರ ಮತಕ್ಕಾಗಿ ಕನ್ನಡಕ್ಕೆ ಎಷ್ಟೆ ಅವಮಾನವಾದರೂ ನೋಡಿಕೊಂಡು ಸುಮ್ಮನಿರುವುದು ಯಾವ ನ್ಯಾಯ? ಕನ್ನಡ ನಾಡಿನ ಹಿತದೃಷ್ಟಿಯಿಂದ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ 3 ಪಕ್ಷಗಳಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪ್ರತಿಭಟನೆ ನೇತೃತ್ವವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್ ಸಿ.ಉಪಾಧ್ಯಕ್ಷೆ ರತ್ನಮ್ಮ, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ನಗರಾಧ್ಯಕ್ಷ ಅವಿನಾಶ್, ಮಹಮದ್ ರಫಿ, ಶಾನ್, ಸುರೇಶ್, ಅಖಿಲೇಶ್, ಹರೀಶ್, ಪ್ರದೀಪ್, ರಾಜಣ್ಣ, ಮಣಿಕಂಠ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ
ಜಿಬಿಎ ಪಾಲಿಕೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಮತದಾನಕ್ಕೆ ತೊಂದರೆ ಆಗದಂತೆ ಕ್ರಮ: ಸುನೀಲ್ ಕುಮಾರ್‌