ಕರಾವಳಿ-ಮಲೆನಾಡಿಗೆ ಹೊಸ ರೂಪ: ಡಿಕೆಶಿ

KannadaprabhaNewsNetwork |  
Published : Sep 18, 2026, 02:30 AM IST
ಮುಖ್ಯಮಂತ್ರಿ ಅವರಿಗೆ ವಿಮಾನ ನಿಲ್ದಾಣಧಲ್ಲಿ ಗೌರವ ವಂದನೆ | Kannada Prabha

ಸಾರಾಂಶ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸಂಪುಟ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ಅವರು ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕರಾವಳಿ ಭಾಗಕ್ಕೆ 340 ಕಿ.ಮೀ. ಉದ್ದದ ಕರಾವಳಿ ತೀರವಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕು. ಕರಾವಳಿ ಹಾಗೂ ಮಲೆನಾಡಿನಲ್ಲಿ ವಲಸೆ ಹೋಗುವುದನ್ನು ತಡೆಯುವಂತಹ ಅವಕಾಶಗಳನ್ನು ಸೃಷ್ಟಿಸಬೇಕು ಎಂದರು.

ಕರ್ನಾಟಕದಲ್ಲೇ ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚು ವಿದ್ಯಾವಂತರು, ಪ್ರಜ್ಞಾವಂತರು, ಪ್ರತಿಭಾವಂತ ಮಾನವ ಸಂಪನ್ಮೂಲವಿದೆ. ಈ ಮಾನವ ಸಂಪತ್ತಿಗೆ ಸ್ಥಳೀಯವಾಗಿಯೇ ಅವಕಾಶ, ಶಕ್ತಿ ತುಂಬುವ ಅಗತ್ಯವಿದೆ ಎಂದರು.

ಕರಾವಳಿ ಭಾಗದ ಜನರು ಕಳೆದ 30-40 ವರ್ಷಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು, ಪಕ್ಷದವರು ಸೇರಿದಂತೆ ಬಿಜೆಪಿ ಶಾಸಕರು ಹಾಗೂ ಸಂಸದರೂ ತಮ್ಮ ಅಭಿಪ್ರಾಯ ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ. ನಾವು ಕೈಹಿಡಿಯದಿದ್ದರೆ ಇನ್ನಾರು ಕೈಹಿಡಿಯುತ್ತಾರೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರ ಹಲವು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡಿದ್ದೇನೆ. ಈ ಎಲ್ಲ ವಿಚಾರಗಳ ಕುರಿತು ಶುಕ್ರವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು.

ವಿಶೇಷ ಅಧಿವೇಶನ:

ಕಸ್ತೂರಿರಂಗನ್ ವರದಿಯನ್ನು ಸರ್ಕಾರ ಈಗಾಗಲೇ ತಿರಸ್ಕರಿಸುವ ನಿಲುವು ಹೊಂದಿದ್ದರೂ, ಈ ವಿಚಾರದಲ್ಲಿ ವಿವಿಧ ಒತ್ತಡಗಳು ಮತ್ತು ಅಭಿಪ್ರಾಯಗಳಿವೆ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನದಲ್ಲಿ ಎಲ್ಲ ಶಾಸಕರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು. ಅಧಿವೇಶನಕ್ಕೂ ಮುನ್ನ ತಾವೇ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಗ್ರೌಂಡ್ ರಿಯಾಲಿಟಿ ಅರಿಯುತ್ತಿರುವುದಾಗಿ ತಿಳಿಸಿದರು. ರೈತರ ಸಮಸ್ಯೆಗಳು ಮತ್ತು ಬರ ಪರಿಸ್ಥಿತಿಯ ವಿಶೇಷ ಅಧಿವೇಶನದಲ್ಲಿ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

ಉಮರ್ ಖಾಲೀದ್ ವಿಚಾರವಾಗಿ ಬಿ.ಕೆ.ಹರಿಪ್ರಸಾದ್ ಅವರು ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಬಿ.ಕೆ.ಹರಿಪ್ರಸಾದ್ ಅವರ ಜೊತೆ ಮಾತನಾಡುತ್ತೇನೆ ಎಂದರು.

ಗೌರವ ವಂದನೆ ಸ್ವೀಕಾರ:

ವಿಮಾನ ನಿಲ್ದಾಣದಿಂದ ಹೊರ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪೊಲೀಸ್‌ ಇಲಾಖೆ ವತಿಯಿಂದ ಸಲ್ಲಿಸಲಾದ ಗೌರವವನ್ನು ಮುಖ್ಯಮಂತ್ರಿ ಅವರು ಸ್ವೀಕರಿಸಿದರು. ಅದಕ್ಕೂ ಮೊದಲು ಜಿಲ್ಲಾಡಳಿತ ವತಿಯಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. ಹಾಗೂ ಪಕ್ಷದ ನಾಯಕರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ತಮ ಪೋಷಣೆಯೇ ಬಾಲ್ಯದ ಅಡಿಪಾಯ: ಸುಮಂಗಲ
ಸಂಸ್ಕಾರಯುತ ಸಮಾಜ ಕಟ್ಟಲು ಗಣೇಶೋತ್ಸವ ಪ್ರೇರಣೆ: ಕಾಮತ್