ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಬಹಿರಂಗ ಕ್ಷಮೆಯಾಚಿಸಿ ಜಿಲ್ಲೆಗೆ ಬರಲಿ

KannadaprabhaNewsNetwork |  
Published : Sep 13, 2025, 02:04 AM IST
12ಕೆಎಂಎನ್ ಡಿ12 | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಮಂಡ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವ ಮುನ್ನ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 2.50 ಕೋಟಿ ರು.ಗಳ ಲೆಕ್ಕ ನೀಡಿ ಜಿಲ್ಲೆಯ ಜನತೆಯ ಬಹಿರಂಗ ಕ್ಷಮೆಯಾಚಿಸಲಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಮಂಡ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವ ಮುನ್ನ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 2.50 ಕೋಟಿ ರು.ಗಳ ಲೆಕ್ಕ ನೀಡಿ ಜಿಲ್ಲೆಯ ಜನತೆಯ ಬಹಿರಂಗ ಕ್ಷಮೆಯಾಚಿಸಲಿ ಎಂದು ಜಿಲ್ಲಾ ಯುವ ಪರಿಷತ್ತಿನ ಅಧ್ಯಕ್ಷ ಕಾರಸವಾಡಿ ಮಹದೇವು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಸೆ.13ರಂದು ಹಿರಿಯ ಸಾಹಿತಿ ಎಚ್.ಎಸ್.ಮುದ್ದೇಗೌಡರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕೂ ಮೊದಲು ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕು ಎಂದರು.

ಮಹೇಶ್ ಜೋಶಿ ಅವರು ತಮ್ಮ ಸರ್ವಾಧಿಕಾರಿ ಧೋರಣೆಯಿಂದ ಜಿಲ್ಲೆಯ ಜನತೆಗೆ ಅವಮಾನವಾಗುವ ರೀತಿ ನಡೆದುಕೊಂಡಿದ್ದಾರೆ. ಸಾಹಿತ್ಯ ಸಮ್ಮೇಳನದ ಜಿಲ್ಲಾ ಸಂಚಾಲಕರಿಂದ ಜಿಲ್ಲಾ ಕಸಾಪ ಪದಾಧಿಕಾರಿಗಳನ್ನು ತೀರ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬೆಲ್ಲದಾರತಿ ಸ್ಮರಣ ಸಂಚಿಕೆ ಸಂಬಂಧ ಪೂರ್ವ ಭಾವಿ ಸಭೆಗೆ ಆಮಿಸುವ ಸುದ್ದಿ ತಿಳಿದು ಕ್ಷಮೆ ಕೋರಲು ಒತ್ತಾಯಿಸಲಾಗಿದೆ. ಸ್ಮರಣ ಸಂಚಿಕೆ ಬಿಡುಗಡೆಗೆ ಭೇಟಿ ನೀಡುವಾಗಲೂ ಕ್ಷಮೆ ಕೇಳಲು ಸೂಚಿಸಿದರೆ ಎರಡೂ ಕಾರ್ಯಕ್ರಮಗಳಿಗೆ ಭೇಟಿ ನೀಡಿ ಕ್ಷಮೆಯಾಚಿಸಿಲ್ಲ. ಇದೀಗ ಖಾಸಗಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನೇ ವಹಿಸಲು ಮುಂದಾಗಿದ್ದಾರೆ. ಅವರು ಜಿಲ್ಲೆಯ ಜನರ ಕ್ಷಮೆ ಕೋರದಿದ್ದರೆ ಪ್ರತಿಭಟನೆಯ ಬಿಸಿ ಮುಟ್ಟಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಡ್ಯ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸುಂಡಹಳ್ಳಿ ಮಹೇಶ್, ಮಾಜಿ ಉಪಾಧ್ಯಕ್ಷ ಎಸ್.ಮಂಜು, ರಾಜ್ಯ ಬೀದಿ ನಾಟಕಗಳ ಒಕ್ಕೂಟದ ರಾಜ್ಯ ಖಜಾಂಚಿ ಶೇಖರ್ ಹನಿಯಂಬಾಡಿ, ಕಸಾಪ ಅಜೀವ ಸದಸ್ಯ ಕೀಲಾರ ಸುರೇಶ್ ಇದ್ದರು.

ಇಂದು ರಾಜ್ಯ ಮಟ್ಟದ ಹವ್ಯಾಸಿ ರಂಗನಟ ಪ್ರಶಸ್ತಿ ಪ್ರದಾನ, ಕೃತಿಗಳ ಬಿಡುಗಡೆ ಸಮಾರಂಭ: ಮುದ್ದೇಗೌಡ

ಕನ್ನಡಪ್ರಭ ವಾರ್ತೆ ಮಂಡ್ಯ

ಜೀವನಾಡಿ ಪತ್ರಿಕೆಯ 4ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಚಲನಚಿತ್ರ ಮತ್ತು ಕಿರುತೆರೆ ನಟ ದಿ.ಎಂ.ರವಿಪ್ರಸಾದ್ ಸ್ಮರಣಾರ್ಥ ಸೆ.13ರಂದು ರಾಜ್ಯ ಮಟ್ಟದ ಹವ್ಯಾಸಿ ರಂಗನಟ ಪ್ರಶಸ್ತಿ, ಜೀವನಾಡಿ ಸಾಹಿತ್ಯ ಸ್ಪರ್ಧೆ ವಿಜೇತರು, ಜೀವನಾಡಿ ವಿಶೇಷ ಸಂಚಿಕೆ ಬಿಡುಗಡೆ, ಜೀವನಾಡಿ ಲೇಖಕರ ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಪತ್ರಿಕೆ ಸಂಪಾದಕ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಗಾಂಧಿ ಭವನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ಅಧ್ಯಕ್ಷತೆ ವಹಿಸುವರು. ಖ್ಯಾತ ಧಾರವಾಹಿ ನಿರ್ದೇಶಕ ಟಿ.ಎನ್.ಸೀತಾರಾಂ ಹಾಗೂ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಚಿತ್ರನಟ ರಾಜೇಶ್ ನಟರಂಗ ಅವರಿಗೆ ಮಂಡ್ಯ ರವಿ ಸ್ಮರಣಾರ್ಥ ರಂಗನಟ ಪ್ರಶಸ್ತಿ ವಿತರಿಸುವರು ಎಂದರು.

ಸಾಹಿತಿ ಡಾ.ಎಸ್.ಶ್ರೀನಿವಾಸಶೆಟ್ಟಿ ಅವರು ಜೀವನಾಡಿ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಸಾಹಿತಿ ಡಾ.ಪ್ರದೀಪ್‌ಕುಮಾರ್ ಹೆಬ್ರಿ ಅವರು ಪುಸ್ತಕಗಳನ್ನು ಬಿಡುಗಡೆ ಮಾಡುವರು. ವಿಶ್ವಾಸ್ ಡಿ.ಗೌಡ ಸಕಲೇಶಪುರ ಹಾಗೂ ಕೀರ್ತಿ ಕಿರಣ್‌ಕುಮಾರ್ ಜಂಭರಡಿ ಅವರು ಕೃತಿಗಳ ವಿಮರ್ಶೆ ಮಾಡುವರು. ಲಿಡ್ಕರ್ ಎಂಡಿ ಡಾ.ಕೆ.ಎಂ.ವಸುಂಧರಾ ಅವರು ತೀರ್ಪುಗಾರರ ಪರ ಮಾತನಾಡುವರು. ಜೈಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಎಸ್.ನಾರಾಯಣ್ ಪ್ರಶಸ್ತಿ ವಿತರಿಸುವರು. ಜಿ.ಎಸ್.ಮಾಲತಿ ಪ್ರಸಾದ್, ರಾಜೀವ್ ಆರ್.ಗೌಡ ಸಮಾರಂಭದಲ್ಲಿ ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಸ್. ನಾರಾಯಣ್, ಅಪ್ಪಾಜಪ್ಪ, ದರಸಗುಪ್ಪೆ ಧನಂಜಯ ಸೇರಿದಂತೆ ಇತರರು ಇದ್ದರು.

PREV

Recommended Stories

ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಪೇದೆ ನೇಮಕಕ್ಕೆ ವಯೋಮಿತಿ ಸಡಿಲಕ್ಕೆ ಶೀಘ್ರ ಪ್ರಸ್ತಾವ : ಪರಂ