ಪಂಚಮಸಾಲಿ ಟ್ರಸ್ಟ್‌ಗೆ ಕಾಶಪ್ಪನವರ ನೂತನ ಅಧ್ಯಕ್ಷ

KannadaprabhaNewsNetwork |  
Published : Apr 18, 2025, 12:46 AM IST
ಕಾಶಪ್ಪನವರ | Kannada Prabha

ಸಾರಾಂಶ

ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನೇ "ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್‌ "ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಹುಬ್ಬಳ್ಳಿ: ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ ಪರವಾಗಿ ಬ್ಯಾಟಿಂಗ್‌ ಮಾಡಿದ್ದಕ್ಕೆ ಕೂಡಲಸಂಗಮ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಸಿಡಿದೆದ್ದಿರುವ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನೇ "ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್‌ "ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಲ್ಲಿನ ಗೋಕುಲ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ನಡೆದ ಟ್ರಸ್ಟ್‌ನ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರನ್ನಾಗಿ ಕಾಶಪ್ಪನವರ, ಪ್ರಧಾನ ಕಾರ್ಯದರ್ಶಿಯನ್ನಾಗಿ ನೀಲಕಂಠ ಅಸೂಟಿ, ಕಾರ್ಯಧ್ಯಕ್ಷರನ್ನಾಗಿ ರಾಜಶೇಖರ ಮೆಣಸಿನಕಾಯಿ ಹಾಗೂ ಗೌರವ ಅಧ್ಯಕ್ಷರನ್ನಾಗಿ ಪ್ರಬಣ್ಣ ಹುಣಸಿಕಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು.

ಇದೇ ವೇಳೆ ರಾಷ್ಟ್ರೀಯ ಘಟಕ, ರಾಜ್ಯ ಯುವ ಘಟಕ, ಮಹಿಳಾ ಘಟಕ ಸೇರಿದಂತೆ ಜಿಲ್ಲಾ, ತಾಲೂಕು ಘಟಕಗಳ ಅಧ್ಯಕ್ಷ, ಪದಾಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಲಾಯಿತು. ಈಗ ನೇಮಕಗೊಂಡಿರುವ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಶೀಘ್ರವೇ ರಾಜ್ಯಾದ್ಯಂತ ಪ್ರವಾಸ ನಡೆಸಿ ಹೊಸದಾಗಿ ಜಿಲ್ಲಾ, ತಾಲೂಕು ಘಟಕಗಳನ್ನು ನೂತನವಾಗಿ ರಚಿಸಬೇಕು. ಜತೆಗೆ ಸಮಾಜವನ್ನು ಸಂಘಟಿಸಲು ಕ್ರಮ ಕೈಗೊಳ್ಳಬೇಕು. ಶ್ರೀ ಪೀಠದ ಅಡಿಗಲ್ಲು ಸಮಾರಂಭ, ಸಮಾಜದ ಸಂಘಟನೆ ಬಲಪಡಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಹಿರಿಯ ಧರ್ಮದರ್ಶಿ ಎಸ್.ಡಿ. ಕೊಳ್ಳಿ ವಹಿಸಿದ್ದರು. ಇದಕ್ಕೂ ಪೂರ್ವದಲ್ಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಬಣ್ಣ ಹುಣಸಿಕಟ್ಟಿ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆಯನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಎಲ್ಲರನ್ನು ಸನ್ಮಾನಿಸಲಾಯಿತು.

ಟ್ರಸ್ಟ್‌ನ ಕಾರ್ಯದರ್ಶಿ ನಂದಕುಮಾರ್ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮದರ್ಶಿಗಳಾದ ಶೇಖರಪ್ಪ ಬಾದವಾಡಗಿ, ಗಂಗಣ್ಣ ಬಾಗೇವಾಡಿ, ಕಲ್ಲಪ್ಪ ಎಲಿವಾಳ, ಕುಮಾರ ಕುಂದನಹಳ್ಳಿ, ಶಿವಾನಂದ ಕಂಠಿ, ಚಂದ್ರಶೇಖರ್ ಹುಣಸಿಕಟ್ಟಿ, ಮುತ್ತಣ್ಣ ಬಾಡಿನ, ಭರತ್ ಅಸೂಟಿ, ಎಂ.ಎಸ್. ಪಾಟೀಲ್, ಎಂ.ಎಸ್‌. ಮಲ್ಲಾಪುರ, ಲಕ್ಷ್ಮಣ ನರಸಾಪುರ್, ಮಹಾದೇವಪ್ಪ ದಾಟನಾಳ ಸೇರಿದಂತೆ ಮುಂತಾದವರು ಆಗಮಿಸಿದ್ದರು.

ಕುತೂಹಲ: ಈ ನಡುವೆ ಇದೇ ಟ್ರಸ್ಟ್‌ನ ಅಡಿಯಲ್ಲೇ ಕೂಡಲಸಂಗಮದ ಪೀಠ ನಡೆಯುತ್ತದೆ. ಈ ಟ್ರಸ್ಟ್‌ ಶ್ರೀಗಳ ವಿರುದ್ಧ ಸಿಡಿದಿದ್ದೆರುವ ಟ್ರಸ್ಟ್‌ಗೆ ಕಾಶಪ್ಪನವರನ್ನೇ ಅಧ್ಯಕ್ಷರನ್ನಾಗಿ ಮಾಡಿರುವುದು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!