ಶಿವಮೊಗ್ಗ: ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್ಎಸ್) ನೋಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡುವ ಕುರಿತು ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜೂ.24 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಮೋಹನ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯಾಗಾರದಲ್ಲಿ ಆರ್ಥಿಕ ಇಲಾಖೆಯ ಎಚ್ಆರ್ಎಂಎಸ್ ತಂತ್ರಾಂಶ-02 ನಿರ್ದೇಶನಾಲಯದಿಂದ ಸಂಪನ್ಮೂಲ ವ್ಯಕ್ತಿಗಳಾಗಿ ಯೋಜನಾಧಿಕಾರಿ ನಿರ್ಮಲಾ ಎಚ್ಆರ್ಎಂಎಸ್-2 ಇಂಟ್ರಡಕ್ಷನ್ ಅಂಡ್ ಇಎಸ್ಆರ್ ಕುರಿತು, ತಾಂತ್ರಿಕ ತರಬೇತುದಾರ ಸುಮಂತ್ ಎಚ್ಆರ್ಎಂಎಸ್-2 ಮಾಡೆಲ್ಸ್ ಕುರಿತು, ಯೋಜನಾಧಿಕಾರಿ ಸುಧಾಮಣಿ ಕೆಎಎಸ್ಎಸ್ ನೋಂದಣಿ ಕುರಿತು ಮಾಹಿತಿ ನೀಡುವರು.