ಯಾವ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿ ಸಲ್ಲ: ಮಹಾದೇವಪ್ಪ

KannadaprabhaNewsNetwork |  
Published : Sep 06, 2026, 01:45 AM IST
ಪೋಟೋ: 05ಎಸ್‌ಎಂಜಿಕೆಪಿ04ಶಿವಮೊಗ್ಗ ಪತ್ರಿಕಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ನಗರದ ಮಹಾದೇವಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಅದೇ ರೀತಿ ಅಡಕೆ ಬೆಳೆಗಾರರ ಹಿತದೃಷ್ಟಿಯಿಂದ ಗುಟ್ಕಾವನ್ನು ಸಂಪೂರ್ಣ ನಿಷೇಧಿಸಬಾರದು ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ನಗರದ ಮಹಾದೇವಪ್ಪ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು. ಅದೇ ರೀತಿ ಅಡಕೆ ಬೆಳೆಗಾರರ ಹಿತದೃಷ್ಟಿಯಿಂದ ಗುಟ್ಕಾವನ್ನು ಸಂಪೂರ್ಣ ನಿಷೇಧಿಸಬಾರದು ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ನಗರದ ಮಹಾದೇವಪ್ಪ ಒತ್ತಾಯಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಲಿದೆ. ವರದಿಯ ವ್ಯಾಪ್ತಿಗೆ ಹುಲ್ಲುಬನ, ಗೋಮಾಳ ಸೇರಿದಂತೆ ವಸತಿ ಪ್ರದೇಶಗಳೂ ಒಳಪಡುವ ಸಾಧ್ಯತೆ ಇದೆ. ಮನೆಗಳ ದುರಸ್ತಿ ಸಹಿತ ರೈತರ ದೈನಂದಿನ ಚಟುವಟಿಕೆಗಳಿಗೂ ನಿರ್ಬಂಧ ಎದುರಾಗಲಿದೆ. ಆದ್ದರಿಂದ ರೈತ ವಿರೋಧಿ ವರದಿಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 102 ತಾಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದ್ದು, ಬರದ ತೀವ್ರತೆ ಇನ್ನಷ್ಟು ಹೆಚ್ಚಿದೆ. ಹೆಚ್ಚಿನ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಬೇಕು. ಎನ್‌ಡಿಆರ್‌ಎಫ್ ನಿಧಿಯನ್ನೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದ ಅವರು, ರೈತಪರ ನಿಲುವು ತಳೆಯದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಖೇಣಿದಾರರಿಂದ ರೈತರಿಗೆ ಸಂಕಷ್ಟ: ರಾಜ್ಯದಲ್ಲಿ ಗುಟ್ಕಾ ನಿಷೇಧದ ಬದಲು ಗುಣಮಟ್ಟದ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೆಲವು ಅಡಕೆ ಖೇಣಿದಾರರು ಹಾಗೂ ವರ್ತಕರಿಂದ ಅಡಕೆಗೆ ರಾಸಾಯನಿಕ ಬಣ್ಣ ಹಚ್ಚುತ್ತಿರುವುದರಿಂದ ಇಡೀ ರೈತ ಸಮೂಹ ಸಂಕಷ್ಟಕ್ಕೆ ಸಿಲುಕಿದೆ. ನಕಲಿ ಬಣ್ಣ ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಗುಟ್ಕಾದಲ್ಲಿ ಆರೋಗ್ಯಕ್ಕೆ ಹಾನಿಕರ ಅಂಶಗಳಿದ್ದರೆ ಅವುಗಳನ್ನು ತೆಗೆದುಹಾಕುವ ಕ್ರಮ ಕೈಗೊಳ್ಳಬೇಕು. ಆದರೆ ಸಂಪೂರ್ಣ ನಿಷೇಧದಿಂದ ಲಕ್ಷಾಂತರ ಅಡಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಕೃಷಿಕ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎನ್. ನಾಗರಾಜ್ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಸಮಾಜದ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಸತೀಶ್, ಪ್ರಮುಖರಾದ ದೇವರಾಜ್ ಪಾಟೀಲ್, ಬಿ. ಜಿ. ಶ್ರೀಧರ್, ಚಂದ್ರಪ್ಪ, ಮೋಹನ್, ದೇವಿಕುಮಾರ್, ಡಿ. ಡಿ. ಶಿವಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನ ಕೊಟ್ಟ ಅರ್ಜಿಗಳು ಕಚೇರಿಗಳಲ್ಲೇ ಕೊಳೆಯಬಾರದು
ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ