)
ನಾಪೋಕ್ಲು: ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಎಂದು ಎಲ್ಲ ಗ್ರಾಪಂಗಳ ಮೂಲಕ ಆಕ್ಷೇಪ ಸಲ್ಲಿಸಲು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಮಾಸಿಕ ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿಲ್ಲಾಧಿಕಾರಿಗಳು ತಕ್ಷಣ ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡಿಸಿ, ಸರ್ಕಾರಕ್ಕೆ ವರದಿ ನೀಡುವಂತೆ ಆಗ್ರಹಿಸಲಾಯಿತು. ವರದಿ ತಯಾರಿಸುವಾಗ ಸ್ಥಳೀಯ ಗ್ರಾಪಂಗಳ ಅಥವಾ ಜನರ ಅಭಿಪ್ರಾಯವನ್ನು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವದ ವಿಕೇಂದ್ರೀಕರಣ ನೀತಿಗೆ ವಿರುದ್ಧವಾಗಿರಬಾರದು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗ್ರಾಮೀಣ ರಸ್ತೆಗಳು, ಸರ್ಕಾರಿ ಕಟ್ಟಡಗಳಿಗೆ ಮತ್ತು ಕೃಷಿಗೆ ಹಾನಿಯಾಗಿದ್ದು ತಕ್ಷಣ ಗ್ರಾಪಂಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಹಾಗೂ ಎಂಡಿಆರ್ಎಫ್ ಅನುದಾನ ಪಡೆಯಲು ಪ್ರಯತ್ನಿಸಬೇಕು. ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಲಾಯಿತು.ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮಗಳಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯ ಆಗಿಲ್ಲ. ಸಮಯಕ್ಕೆ ಸರಿಯಾಗಿ ನಡೆಯದೆ ಇದರ ಬಗ್ಗೆ ಎಲ್ಲ ಗ್ರಾಮಗಳಿಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ತಾಪಂ ಆಡಳಿತ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ ತಕ್ಷಣ