ಆದಾಯ ತರುವ ಮುಜರಾಯಿ ದೇವಳ: ಕಟೀಲಿಗೆ ನಾಲ್ಕನೇ ಸ್ಥಾನ

KannadaprabhaNewsNetwork |  
Published : Jan 07, 2026, 03:15 AM IST
ಮುಜರಾಯಿ ದೇವಳಗಳ 2024-25 ರ ಆದಾಯದಲ್ಲಿ ಕಟೀಲಿಗೆ ನಾಲ್ಕನೇ ಸ್ತಾನ  | Kannada Prabha

ಸಾರಾಂಶ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ.

ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡಿ ಬೆಟ್ಟ ಮೊದಲ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷ 2023-24 ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ ಮೂರೂವರೆ ಕೋಟಿ ರು. ಆದಾಯ ಹೆಚ್ಚಾಗಿದೆ. ವಿವಿಧ ಸೇವೆಗಳಿಂದ 12 ಕೋಟಿ, ಕೋಣೆ ಬಾಡಿಗೆಯಿಂದ 70 ಲಕ್ಷ ರು., ಕಟ್ಟಡ ಬಾಡಿಗೆಯಿಂದ 44 ಲಕ್ಷ, ಅನ್ನದಾನ, ವಿದ್ಯಾದಾನ ಕಾಣಿಕೆ ಮತ್ತು ಹುಂಡಿಯಿಂದ 6 ಕೋಟಿ ರು., ಕಾಣಿಕೆ ಹುಂಡಿಯಿಂದ 6.30 ಕೋಟಿ, ಇ-ಹುಂಡಿಯಿಂದ 24 ಲಕ್ಷ, ಯಕ್ಷಗಾನ ಮೇಳದ ಕಾಣಿಕೆ, ತತ್ಕಾಲ್, ನೋಂದಣಿ, ಹುಂಡಿಗಳಿಂದ 1.83 ಕೋಟಿ ರು., ಶೀಘ್ರ ದರ್ಶನದಿಂದ 14 ಲಕ್ಷ ರು., ಶೇಷ ವಸ್ತ್ರ ಮಾರಾಟದಿಂದ 1.62 ಕೋಟಿ ರು., ಚಿನ್ನದ ರಥೋತ್ಸವ ಕಾಣಿಕೆಯಿಂದ 6.40 ಲಕ್ಷ ರು., ಹಣ್ಣುಕಾಯಿ ಕೌಂಟರ್, ಸೀರೆ ಫೋಟೊ ಕೌಂಟರ್ ಹಾಗೂ ನಂದಿನಿ ಮಿಲ್ಕ್ ಪಾರ್ಲರ್ ಸಾಮಾಗ್ರಿ ಮಾರಾಟದಿಂದ 82 ಲಕ್ಷ ರು., ನಿರಖು ಠೇವಣಿಯ ಬಡ್ಡಿಯಿಂದ 3.70 ಕೋಟಿ ರು. ಆದಾಯ ಬಂದಿದೆ.

ನೌಕರರ ವೇತನಕ್ಕೆ 3.35 ಕೋಟಿ ರು., ಭದ್ರತಾ ಸಿಬಂದಿಗಳ ವೇತನಕ್ಕೆ 1 ಕೋಟಿ ರು., ಹೌಸ್ ಕೀಪಿಂಗ್ ನೌಕರರ ವೇತನ 39 ಲಕ್ಷ ರು., ಸೇವಾ ಬಟವಾಡೆ 1.15 ಕೋಟಿ ರು., ಬೆಳಕು ವ್ಯವಸ್ಥೆ 48 ಲಕ್ಷ ರು. , ಅಂಚೆ, ಸೇವಾ ಆರಾಧನೆಗೆ 4.27 ಕೋಟಿ ರು., ಅನ್ನದಾನಕ್ಕೆ 5.41 ಕೋಟಿ ರು., ಶಾಲಾ ಮಕ್ಕಳ ಬಿಸಿಯೂಟಕ್ಕೆ 8 ಲಕ್ಷ ರು., ಉತ್ಸವಕ್ಕೆ 1.12ಕೋಟಿ, ಜಾನುವಾರು, ಆನೆ ಸಾಕಾಣೆಗೆ 1 ಕೋಟಿ ರು., ಅನ್ನಪೂರ್ಣ ಶಾಲೆಯ ಹಿಂಬದಿಗೆ ತಡೆಗೋಡೆ ನಿರ್ಮಾಣಕ್ಕೆ 50 ಲಕ್ಷ ರು., ನಂದಿನಿ ವಸತಿಗೃಹ ಹಿಂಭಾಗದ ರಸ್ತೆಗೆ ಕಾಂಕ್ರೀಟೀಕರಣಕ್ಕೆ 70 ಲಕ್ಷ ರು., ಹಿರಿಯ ಪ್ರಾಥಮಿಕ, ಪ್ರೌಢಶಾಲೆಗೆ 1.33 ಕೋಟಿ ರು., ಪದವೀ ಪೂರ್ವ ಕಾಲೇಜಿಗೆ 2.85 ಕೋಟಿ ರು., ಪ್ರಥಮ ದರ್ಜೆ ಕಾಲೇಜಿಗೆ 4.16 ಕೋಟಿ ರು., ವಿದ್ಯಾಸಂಸ್ಥೆಗಳ ನಿವೃತ್ತ ಖಾಯಂ ಸಿಬ್ಬಂದಿಗೆ ಉಪ ಧನ ಪಾವತಿಯನ್ನು ಎಲ್‌ಐಸಿಯಲ್ಲಿ ಡಿಪಾಸಿಟ್‌ಗೆ 50 ಲಕ್ಷ ರು., ಆಡಿಟ್‌ಗೆ 50 ಲಕ್ಷ ಹೀಗೆ 32.29 ಕೋಟಿ ರು. ಖರ್ಚು ಆಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ