ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಬಿಡುಗಡೆ

KannadaprabhaNewsNetwork |  
Published : Nov 04, 2025, 03:15 AM IST
03ಆಮಂತ್ರಣ | Kannada Prabha

ಸಾರಾಂಶ

ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನ. 5ರಂದು ಹೆಜಮಾಡಿ ಬಿಲ್ಲವರ ಸಂಘ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಪರಿಕ್ರಮ- ಕನ್ನಡ ಕಥಾ ಸಾಹಿತ್ಯದ ಚಿಂತನ ಮಂಥನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹೆಜಮಾಡಿ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಪಡುಬಿದ್ರಿ

ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನ. 5ರಂದು ಹೆಜಮಾಡಿ ಬಿಲ್ಲವರ ಸಂಘ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಪರಿಕ್ರಮ- ಕನ್ನಡ ಕಥಾ ಸಾಹಿತ್ಯದ ಚಿಂತನ ಮಂಥನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹೆಜಮಾಡಿ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.ಶ್ರೀ ದೇವಳದ ಅರ್ಚಕ ಶ್ರೀನಿವಾಸ ಆಚಾರ್ಯ, ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಷೇತ್ರದ ಆಡಳಿತ ಮೊಕ್ತೇಸರರು ಹಾಗೂ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಹೆಜಮಾಡಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭ ಕಸಾಪ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಶ್ಮಾ ಎ.ಮೆಂಡನ್, ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯ ಶ್ರೀನಿವಾಸಮೂರ್ತಿ ರಾವ್, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ, ಜೊತೆ ಕಾರ್ಯದರ್ಶಿ ಪವಿತ್ರಾ ಗಿರೀಶ್, ಉಪಾಧ್ಯಕ್ಷರಾದ ಸಂಜೀವ ಟಿ. ಹರೀಶ್‌ಕುಮಾರ್ ಹೆಜಮಾಡಿ, ಕಾಪು ಕಸಾಪ ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ತಾಲೂಕು ಸಮಿತಿಯ ಸದಸ್ಯರಾದ ವಿದ್ಯಾ ಅಮ್ಮಣ್ಣಾಯ, ಮಧುಕರ್ ಎಸ್. ಕಲ್ಯಾ, ದೇವದಾಸ್ ಪಾಟ್ಕರ್ ಮುದರಂಗಡಿ, ದೀಪಕ್ ಬೀರ, ಸಮ್ಮೇಳನ ಸಮಿತಿಯ ಭರತ್ ಕಾಂಚನ್, ಸನಾ ಇಬ್ರಾಹಿಂ, ದೀಪಕ್ ಕೊಟ್ಯಾನ್, ಚಂದ್ರಹಾಸ್ ಕೊಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ