ಕನ್ನಡಪ್ರಭ ವಾರ್ತೆ ಮೈಸೂರು
ಎಂಡಿಎ ನಿರ್ಧಾರಗಳು ನಗರಾಭಿವೃದ್ಧಿ ಸಚಿವರ ಮನೆಯಲ್ಲಿ ನಡೆಯುತ್ತಿದ್ದು, ಈ ಹಿಂದಿನ ಆಯುಕ್ತ ಕೆ.ಆರ್. ರಕ್ಷಿತ್ ಅವರ ಅವಧಿಯಲ್ಲಿನ ಎಲ್ಲಾ ತೀರ್ಮಾನಗಳನ್ನು ಸರ್ಕಾರ ಅಮಾನತ್ತಿನಲ್ಲಿಡಬೇಕು ಎಂಬ ಕೌಟಿಲ್ಯ ರಘು ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಬಾಯಿಗೆ ಬಂದಿದ್ದನ್ನೆಲ್ಲ ಹೇಳುವುದು ವಿಧಾನಪರಿಷತ್ ಸದಸ್ಯ ಸ್ಥಾನದಲ್ಲಿರುವ ನಿಮಗೆ ಗೌರವ ತರಲ್ಲ ಎಂದಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸುವ ಬದಲು ದಾಖಲೆಗಳನ್ನಿಟ್ಟು ಮಾತನಾಡಲಿ. ಮುಡಾ ಹಗರಣ ಈಗಾಗಲೇ ಮುಗಿದು ಸಿದ್ದರಾಮಯ್ಯ ಅವರು ಕಳಂಕ ಮುಕ್ತರಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮಾಡಿ ಬಿಜೆಪಿ- ಜೆಡಿಎಸ್ ನಾಯಕರು ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಆದರೂ ಬುದ್ಧಿ ಬಂದಿಲ್ಲ ಎಂದು ತಿವಿದಿದ್ದಾರೆ.ಇನ್ನೂ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಖಾತೆ ಬದಲಾವಣೆ ಮಾಡಬೇಕೆಂಬ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ಯತೀಂದ್ರ ಅವರು ಎಲ್ಲೋ ಕೂತಿದ್ದು ಬಂದು ಖಾತೆ ವಹಿಸಿ ಕೊಂಡಿಲ್ಲ, ರಾಜ್ಯ ಸುತ್ತಿದ್ದಾರೆ. ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸಿದ್ದಲ್ಲದೇ, ಕಾಂಗ್ರೆಸ್ ಪಕ್ಷದ ಸಾಧನೆಗಳನ್ನ ಜನರ ಮುಂದಿಟ್ಟು, ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅವರ ಸಾಮರ್ಥ್ಯ ನೋಡಿಯೇ ಹೈಕಮಾಂಡ್ ನಗರಾಭಿವೃದ್ಧಿ ಖಾತೆ ಕೊಟ್ಟಿದೆ ಎಂದು ಹೇಳಿದ್ದಾರೆ.
ಬಿಡದಿಯಲ್ಲಿ ಶಾಂತವಾಗಿ ಪ್ರತಿಭಟಿಸುತ್ತಿದ್ದ ರೈತರಿಗೆ ಇಲ್ಲಸಲ್ಲದ ಪ್ರಚೋದನೆ ನೀಡಿ ಒಕ್ಕಲೆಬ್ಬಿಸಿದ್ದೀರಿ. ಗಲಾಟೆ ಮಾಡಿಸಿದ್ದೀರಿ. ಯತೀಂದ್ರ ಅವರನ್ನ ಪ್ರಶ್ನಿಸಲು ನಿಮಗೆ ಯಾವ ನೈತಿಕತೆಯಿದೆ ಎಂದು ಅವರು ಪ್ರಶ್ನಿಸಿದ್ದಾರೆ.