ಕೌಟಿಲ್ಯನ ಅರ್ಥಶಾಸ್ತ್ರವು ಸಾರ್ವಕಾಲಿಕವಾದದ್ದು: ಡಾ.ಜಿ.ವಿ.ಜೋಶಿ

KannadaprabhaNewsNetwork |  
Published : Jun 04, 2025, 01:51 AM IST
ಫೋಟೋ : ೧ಕೆಎಂಟಿ_ಜೆಯುಎನ್_ಕೆಪಿ೧ : ಹವ್ಯಕ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಸಾಧನೆ ಮಾಡಿದ ಹವ್ಯಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಡಾ. ಜಿ.ವಿ.ಜೋಶಿ, ಚಂದ್ರಶೇಖರ ಉಪಾಧ್ಯಾಯ ಇದ್ದರು.  | Kannada Prabha

ಸಾರಾಂಶ

ಅಂಗವಿಕಲರು, ರೋಗಿಗಳು, ವಯೋವೃದ್ಧರು, ಸ್ತ್ರೀ ಮತ್ತು ಬ್ರಾಹ್ಮಣರು ದುರ್ಬಲ ವರ್ಗವಾಗಿದ್ದು, ಇವರನ್ನೆಲ್ಲ ಒಳಗೊಂಡೇ ದೇಶ ಪ್ರಗತಿ ಸಾಧಿಸಬೇಕು

ಕುಮಟಾ: ಅಂಗವಿಕಲರು, ರೋಗಿಗಳು, ವಯೋವೃದ್ಧರು, ಸ್ತ್ರೀ ಮತ್ತು ಬ್ರಾಹ್ಮಣರು ದುರ್ಬಲ ವರ್ಗವಾಗಿದ್ದು, ಇವರನ್ನೆಲ್ಲ ಒಳಗೊಂಡೇ ದೇಶ ಪ್ರಗತಿ ಸಾಧಿಸಬೇಕು ಎಂದು ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ನಿರ್ದೇಶಿಸಿದೆ. ಕೌಟಿಲ್ಯನ ಅರ್ಥಶಾಸ್ತ್ರವು ಸಾರ್ವಕಾಲಿಕ ಮಹತ್ವ ಉಳ್ಳದ್ದಾಗಿದೆ ಎಂದು ಆರ್ಥಿಕ ತಜ್ಞ ಡಾ. ಜಿ.ವಿ. ಜೋಶಿ ಹೇಳಿದರು.

ಹವ್ಯಕ ಸಭಾಮಂಟಪದಲ್ಲಿ ಹವ್ಯಕ ವಿದ್ಯಾವರ್ಧಕ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ "ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿ - ಒಂದು ಪರಿಕಲ್ಪನೆ " ಎಂಬ ವಿಷಯದ ಮೇಲೆ ಉಪನ್ಯಾಸ ಮಾಡಿದರು.

ಅಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ ಮಾತನಾಡಿ, ಜೀವನದಲ್ಲಿ ಎಷ್ಟೇ ಎತ್ತರದ ಸಾಧನೆ ಮಾಡಿ ಯಶಸ್ವಿಯಾಗಿದ್ದರೂ ತಂದೆ, ತಾಯಿ, ಕುಟುಂಬ ಹಾಗೂ ಸಮಾಜವನ್ನು ಎಂದಿಗೂ ಮರೆಯಬಾರದು. ಸಮಾಜದ ಋಣವನ್ನು ಪ್ರತಿಯೊಬ್ಬರೂ ತೀರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಅಧಿಕ ಅಂಕ ಗಳಿಸಿದ ತಾಲೂಕಿನ ಹವ್ಯಕ ಸಾಧಕ ವಿದ್ಯಾರ್ಥಿಗಳನ್ನು ಸಂಘದಿಂದ ಪುರಸ್ಕರಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯದರ್ಶಿ ಮಧು ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶದಲ್ಲಿ 70 ದಿನಕ್ಕೆ ಆಗವಷ್ಟು ತೈಲ ದಾಸ್ತಾನು ಇದೆ: ಜೋಶಿ
ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಬೆಂಗಳೂರಿನ ಯುವ ಸಮೂಹ