ಕಾವಡೆ ಅವರ ತತ್ವಾದರ್ಶಗಳು ಅನುಕರಣೀಯ

KannadaprabhaNewsNetwork |  
Published : Jun 25, 2026, 02:45 AM IST
ಪೋಟೋ :24ಜಿಎಲ್ಡಿ1- ಗುಳೇದಗುಡ್ಡದ ಬಾಲಕರ ಸರ್ಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಲ.ದ.ಕಾವಡೆಯವರ 15 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಬಡವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಮದ್ಯಪಾನ, ದೇವರ ಹೆಸರಿನಲ್ಲಿ ಪ್ರಾಣಿ ವಧೆ ಮಾಡದಂತೆ ತಮ್ಮ ಬದುಕಿನುದ್ದಕ್ಕೂ ಹೋರಾಡಿದ, ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಲಕ್ಷಣಸಾ ಕಾವಡೆ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮುರುಡಿ ಗ್ರಾಮದ ಸಾಮಾಜಿಕ ಹೋರಾಟಗಾರ ಯಮನಪ್ಪ ದಳಪತಿ ಹೇಳಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಮದ್ಯಪಾನ, ದೇವರ ಹೆಸರಿನಲ್ಲಿ ಪ್ರಾಣಿ ವಧೆ ಮಾಡದಂತೆ ತಮ್ಮ ಬದುಕಿನುದ್ದಕ್ಕೂ ಹೋರಾಡಿದ, ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಲಕ್ಷಣಸಾ ಕಾವಡೆ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮುರುಡಿ ಗ್ರಾಮದ ಸಾಮಾಜಿಕ ಹೋರಾಟಗಾರ ಯಮನಪ್ಪ ದಳಪತಿ ಹೇಳಿದರು. ಪಟ್ಟಣದ ಗುಳೇದಗುಡ್ಡದ ಬಾಲಕರ ಸರ್ಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಬುಧವಾರ ಕಲ್ಪವೃಕ್ಷ ಗ್ರಾಮೀಣ ಹಾಗೂ ನಗರಾಭಿವೃದ್ಧಿ ಸಂಸ್ಥೆ, ಭೀಮವಾಹಿನಿ ಮತ್ತು ಅಭಯಾಮೃತ ಸಂಸ್ಥೆ ಇವುಗಳ ಸಹಯೋಗದಲ್ಲಿ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಲ.ದ.ಕಾವಡೆಯವರ 15ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿದರು.

ಲ.ದ.ಕಾವಡೆ ಅಜ್ಜನವರು ನಮ್ಮನ್ನಗಲಿ ಇಂದಿಗೆ 15 ವರ್ಷಗಳಾದವು. ಅವರೊಂದಿಗೆ ಕಳೆದ ಆ ದಿನಗಳ ನೆನಪು ಇನ್ನು ಮಾಸಿಲ್ಲ. ತಳ ಸಮುದಾಯದ ನಮ್ಮನ್ನು ತಮ್ಮ ಮಕ್ಕಳಂತೆ ಕಂಡು ಜತೆಯಲ್ಲಿ ಊಟ ಮಾಡುತ್ತಿದ್ದರು. ಜಾತಿ, ಧರ್ಮ ಮೀರಿ ಮಾನವೀಯತೆಯ ನೆಲೆಯಲ್ಲಿ ಸಕಲ ಪ್ರಾಣಿ, ಪಕ್ಷಿ, ಮನುಷ್ಯರನ್ನು ಕಂಡರು. ಅಂದಿನ ರಾಜ್ಯದ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ನಿಕಟವರ್ತಿಗಳಾಗಿದ್ದರು. ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದರು. ಪ್ರಾಣಿ ದಯಾಸಂಘ ಕಟ್ಟಿ ಜಾತ್ರೆ, ಉತ್ಸವಗಳಲ್ಲಿ ಪ್ರಾಣಿ ಸಂಕುಲದ ವಧೆ ಮಾಡದಂತೆ ಹೋರಾಡಿದರು. ಅವರೊಂದಿಗೆ ನಾನು ಕಳೆದ ಆ ದಿನಗಳು ಸ್ಮರಣೀಯ ಎಂದು ಭಾವುಕರಾಗಿ ಕಣ್ಣಲ್ಲಿ ನೀರು ತಂದರು.

ಲ.ದ.ಕಾವಡೆ ಅವರ ಶಿಷ್ಯ ಅಶೋಕ ಹೆಗಡೆ ಮಾತನಾಡಿ, ಕಾವಡೆ ಅಜ್ಜನವರ ಒಡನಾಟದಲ್ಲಿ ಬೆಳೆದ ನನಗೆ ಅವರ ಆದರ್ಶಗಳು ಬದುಕನ್ನು ಸನ್ಮಾರ್ಗದತ್ತ ಕರೆತಂದವು. ಅವರ ಸಾಮಾಜಿಕ ಕಳಕಳಿ ಅನುಕರಣೀಯ ಎಂದರು. ವಿಶ್ರಾಂತ ಪ್ರಾಚಾರ್ಯ ಡಾ.ಸಿ.ಎಂ.ಜೋಶಿ, ಉಪಪ್ರಾಚಾರ್ಯ ಎನ್.ಸಿ.ಮುದಕವಿ, ಬಡಿಗೇರ ವಕೀಲರು ಲ.ದ.ಕಾವಡೆ ಅವರ ಕುರಿತಾಗಿ ಮಾತನಾಡಿದರು. ಹಿರಿಯಪ್ಪ ಮಾದರ ಅಧ್ಯಕ್ಷತೆ ವಹಿಸಿದ್ದರು.

ಶಾಲೆಯ ಎಸ್ಸೆಸ್ಸೆಲ್ಸಿ ಬಡ ವಿದ್ಯಾರ್ಥಿಗಳಗೆ ಸಾಂಕೇತಿಕವಾಗಿ ನೋಟ ಬುಕ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪಾರ್ಚಣೆ ಮಾಡಲಾಯಿತು. ಶ್ರೀಕಾಂತ ಹುನಗುಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಹೋರಾತ್ರಿ ಧರಣಿ ಸ್ಥಳಕ್ಕೆ ಎಂಎಲ್ಸಿ ನಿರಾಣಿ ಭೇಟಿ
20 ವರ್ಷದ ಸಮಸ್ಯೆ ಪರಿಹರಿಸಿ