ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕೆಆರ್ಎಸ್ ಬೃಂದಾವನದಲ್ಲಿರುವ ದೋಣಿ ವಿಹಾರ ಕೇಂದ್ರದಲ್ಲಿರುವ ಚಿಕ್ಕ ಕಾವೇರಿ ಪ್ರತಿಮ ಮುಂಭಾಗದಲ್ಲಿ ಸ್ಥಳ ಪರೀಶೀಲನೆ ಮಾಡಿದ ಕಾವೇರಿ ಆರತಿ ಸಮಿತಿ ಅಧ್ಯಕ್ಷರು ಮತ್ತು ಶಾಸಕರು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಚರ್ಚಿಸಿ ಈ ಭಾಗದಲ್ಲಿ ತೆಲುವ ವೇದಿಕೆ ನಿರ್ಮಿಸಿ ಕಾವೇರಿ ಆರತಿ ಮಾಡಲು ತೀರ್ಮಾನಿಸಲಾಯಿತು.
ನಂತರ ಬೃಂದಾವನದ ವಿವಿಧ ಭಾಗಗಳು ಮತ್ತು ಪ್ರವಾಸಿಗ ಪ್ರವೇಶ ದ್ವಾರದ ಮುಂಭಾಗದಲ್ಲಿ ಸ್ಥಳ ಪರಿಶೀಲನೆ ಮಾಡಿದ ತಂಡ ವಿವಿಧ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಬಗ್ಗೆ ಚರ್ಚಿಸಿದರು.ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಬೃಂದಾವನದಲ್ಲಿ ವಿಶೇಷವಾಗಿ ಕಾವೇರಿ ಆರತಿ ಮಾಡುವ ಹಿನ್ನೆಲೆಯಲ್ಲಿ ವಿಶೇಷವಾಗಿ ವೇದಿಕೆ ನಿರ್ಮಿಸಿ ಮನೋರಂಜನಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಈ ವೇಳೆ ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರ ರಘುರಾಮ್, ಕಾರ್ಯಪಾಲಕ ಅಭಿಯಂತರ ಜಯಂತ್, ಸಹಾಯಕ ಕಾರ್ಯಪಾಲಕ ಅಭಿಯಂತರ ಫಾರೂಕ್ ಅಭು, ಕಿಶೋರ್ ಕುಮಾರ್, ಸಹಾಯಕ ಅಭಿಂತರರು ಸೇರಿದಂತೆ ಇತರರು ಇದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆ ಮಾಡಿದ ಸಚಿವರು, ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್.ನಾಗಾಭರಣ ನೆರವೇರಿಸಲಿದ್ದಾರೆ ಎಂದರು.
ಈ ವೇಳೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.