ಕನ್ನಡಪ್ರಭ ವಾರ್ತೆ ಕೋಲಾರ
ನಗರದ ತಮ್ಮ ಗೃಹ ಕಚೇರಿಯಲ್ಲಿ ಇಫ್ಕೋ ಸೇವಾ ಸಂಸ್ಥೆಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ 9 ವಿದ್ಯಾರ್ಥಿಗಳಿಗೆ ೬ ಲಕ್ಷ ರು.ಗಳ ಶೈಕ್ಷಣಿಕ ನೆರವು ಚೆಕ್ಗಳನ್ನು ವಿತರಿಸಿದ ಅವರು ಸುದ್ಧಿಗಾರರೊಂದಿಗೆ ಮಾತನಾಡಿ.
ಜಿಲ್ಲೆಗೆ ವರವಾದ ಕೆಸಿ ವ್ಯಾಲಿಮಳೆ ಬೆಳೆಗಳಲ್ಲದೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರವು ಮುಂದಾಗಬೇಕಾಗಿದೆ. ಕಳೆದ ೨ ವರ್ಷದಿಂದ ನಮ್ಮ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿ ಯೋಜನೆಯಿಂದ ಅಂತರ್ಜಲ ಅಭಿವೃದ್ಧಿಯಾಗಿ ಕೃಷಿಯಲ್ಲಿ ಸುಧಾರಣೆ ಕಾಣಬಹುದಾಗಿರುವುದು ಸಮಾಧಾನಕರ ಸಂಗತಿಯಾಗಿದೆ ಎಂದರು.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾನು ಹೆಚ್ಚಾಗಿ ತಲೆಕೆಡಿಸಿಕೊಂಡಿಲ್ಲ, ನನಗೂ ಕೆ.ಹೆಚ್. ಮುನಿಯಪ್ಪರಿಗೂ ಯಾವುದೇ ವೈಮನಸ್ಸುಗಳು ಇಲ್ಲ, , ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಪ್ರಚಾರಕ್ಕೆ ಹೋಗುತ್ತೇನೆ. ಹಿಂದಿನ ಲೋಕಸಭಾ ಚುನಾವಣೆಯ ಪರಿಸ್ಥಿತಿಗಳು ಬೇರೆ ರೀತಿ ಇತ್ತು ಈಗಿನದೆ ಬೇರೆಯಾಗಿದೆ, ೮ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲರ ಅಭಿಪ್ರಾಯ ಪಡೆದು ಹೊಂದಾಣಿಕೆ ಮಾಡಿಕೊಂಡು ಹೋದರೆ ಯಶಸ್ಸು ಸಾಧಿಸಬಹುದು, ಈ ಭಾಗವು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು ಎಂದು ಅಭಿಪ್ರಾಯಪಟ್ಟರು.
ವಿಧಾನಪರಿಷತ್ ಚುನಾವಣೆವಿಧಾನ ಪರಿಷತ್ ಚುನಾವಣೆಗೆ ಇನ್ನೂ ೪-೫ ತಿಂಗಳು ಇದೆ, ಸಿಎಂ ಸಿದ್ದರಾಮಯ್ಯನವರ ಮನಸ್ಸಿನಲ್ಲಿ ನನಗೆ ಕೊಟ್ಟಿರುವ ಮಾತು ಉಳಿದಿದೆ, ಕೋಲಾರಕ್ಕೆ ಬಂದಿದ್ದ ಸಂದರ್ಭದಲ್ಲಿ ನಾನು ಇಸ್ರೇಲ್ಗೆ ಹೋಗಿದ್ದೆ ಆಗಲೂ ನನ್ನನ್ನು ನೆನಪಿಸಿಕೊಂಡಿದ್ದಾರೆ, ಇನ್ನು ಕಾಲವಕಾಶವಿದೆ ಕಾದು ನೋಡೋಣ ಎಂದರು. ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಸಿ. ಮಾಜಿ ಅಧ್ಯಕ್ಷ ನಾಗನಾಳ ಸೋಮಣ್ಣ ಇದ್ದರು.