ಅನ್ನದಾತರ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೆಡಿಸಿಸಿ ಬ್ಯಾಂಕ್‌: ಹೆಬ್ಬಾರ

KannadaprabhaNewsNetwork |  
Published : Jul 10, 2024, 12:37 AM IST
ಮುಂಡಗೋಡದಲ್ಲಿ ಶಾಸಕ ಶಿವರಾಮ ಹೆಬ್ಬಾರ ಮಂಗಳವಾರ ತಾಲೂಕಿನ ಇಂದೂರ ಗ್ರಾಮದಲ್ಲಿ ಕೆಡಿಸಿಸಿ ಬ್ಯಾಂಕ್‌ನ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ರೈತರನ್ನು ಸಮಾನತೆಯಿಂದ ಕಾಣುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಮಾತ್ರ ರೈತರ ಸಬಲಿಕರಣಕ್ಕಾಗಿ ಶೂನ್ಯ ಹಾಗೂ ೩ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಹಾಗಾಗಿ ಇದು ರೈತರ ಬ್ಯಾಂಕು.

ಮುಂಡಗೋಡ: ೧೦೫ ವರ್ಷ ಇತಿಹಾಸ ಹೊಂದಿರುವ ಉತ್ತರಕನ್ನಡ ಜಿಲ್ಲಾ ಮಧ್ಯವರ್ತಿ(ಕೆಡಿಸಿಸಿ) ಬ್ಯಾಂಕ್ ರಾಜ್ಯದಲ್ಲಿಯೇ ಎರಡನೇ ಅತಿ ದೊಡ್ಡ ಬ್ಯಾಂಕ್ ಆಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಮಂಗಳವಾರ ತಾಲೂಕಿನ ಇಂದೂರ ಗ್ರಾಮದಲ್ಲಿ ಕೆಡಿಸಿಸಿ ಬ್ಯಾಂಕ್‌ನ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಕೆಡಿಸಿಸಿ ಬ್ಯಾಂಕು ಜಿಲ್ಲೆಯಲ್ಲಿ ಒಟ್ಟು ೭೩ ಶಾಖೆಗಳನ್ನು ಹೊಂದಿದ್ದು, ವರ್ಷದಿಂದ ವರ್ಷಕ್ಕೆ ಪ್ರಗತಿಯತ್ತ ದಾಪುಗಾಲಿಡುತ್ತ ಸಾಗಿದೆ.

ಕೆನರಾ, ಸಿಂಡಿಕೇಟ್ ಹಾಗೂ ಸ್ಟೇಟ್ ಬ್ಯಾಂಕ್‌ಗಳಾವೂ ನಮ್ಮ ಬ್ಯಾಂಕ್ ಅಲ್ಲ, ಬದಲಾಗಿ ದೇಶದ ಬ್ಯಾಂಕ್‌ಗಳು, ಆವ್ಯಾವು ರೈತರಿಗೆ ಶೂನ್ಯ ಹಾಗೂ ೩ರ ಬಡ್ಡಿ ದರದಲ್ಲಿ ಸಾಲ ನೀಡುವುದಿಲ್ಲ. ರೈತರನ್ನು ಸಮಾನತೆಯಿಂದ ಕಾಣುವ ಜಿಲ್ಲಾ ಮಧ್ಯವರ್ತಿ ಕೆಡಿಸಿಸಿ ಬ್ಯಾಂಕ್ ಮಾತ್ರ ರೈತರ ಸಬಲಿಕರಣಕ್ಕಾಗಿ ಶೂನ್ಯ ಹಾಗೂ ೩ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಹಾಗಾಗಿ ಇದು ರೈತರ ಬ್ಯಾಂಕು. ಹಾಗಾಗಿ ಇಲ್ಲಿ ಸಾಲ ಪಡೆಯುವುದರೊಂದಿಗೆ ಸ್ಥಿರ ಠೇವಣಿ ಕೂಡ ಮಾಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕ ಎಲ್.ಟಿ. ಪಾಟೀಲ, ಪ್ರಮೋದ ಡವಳೆ, ಜಿಪಂ ಮಾಜಿ ಸದಸ್ಯ ರವಿಗೌಡ ಪಾಟೀಲ, ಗ್ರಾಪಂ ಅಧ್ಯಕ್ಷ ಶಶಿಧರ ಪರ್ವಾಪುರ, ಇಂದೂರ ಸಹಕಾರಿ ಸಂಘದ ಅಧ್ಯಕ್ಷ ಶಿವಾಜಿ ದೇವಿಕೊಪ್ಪ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಕೃಷ್ಣ ಹಿರೇಹಳ್ಳಿ, ಜ್ಞಾನದೇವ ಗುಡಿಯಾಳ, ಸಿದ್ದಪ್ಪ ಹಡಪದ, ಕೆಂಜೋಡಿ ಗಲಬಿ, ದೇವು ಜಾನು ಪಾಟೀಲ, ಎಚ್.ಎಂ. ನಾಯ್ಕ, ಧರ್ಮರಾಜ ನಡಗೇರಿ ಮುಂತಾದವರು ಉಪಸ್ಥಿತರಿದ್ದರು. ಮಂಜುನಾಥ ನಡಗೇರಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ