ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ (ಡಯಟ್) ಗುರುವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ ನ್ಯಾಯ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ ಕುರಿತು ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಮಗುವಿಗೂ ಮೊಬೈಲ್, ಇಂಟರ್ನೆಟ್ ದೊರೆಯುತ್ತಿದ್ದು, ಮಕ್ಕಳು ಸಾಮಾಜಿಕ ತಾಣಗಳನ್ನು ಬಳಸುತ್ತಿದ್ದಾರೆ. ಇದರಿಂದ ಮಕ್ಕಳು ಮಾನಸಿಕವಾಗಿ ಯಾವ ರೀತಿಯಾಗಿ ಇರಬೇಕಿತ್ತೋ ಆ ರೀತಿ ಬೆಳೆಯದೇ ಇನ್ನೊಂದು ದಿಕ್ಕಿನಲ್ಲಿ ಬೆಳೆಯುತ್ತಿದ್ದಾರೆ. ಇದರಿಂದ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ಸಾಮಾಜಿಕ ಜಾಲತಾಣ ಬಳಸುವ ಮಕ್ಕಳ ಬೆಳವಣಿಗೆ, ನಡತೆ, ನುಡಿಯಲ್ಲಿ ಬಹಳಷ್ಟು ವ್ಯತ್ಯಾಸ ಕಾಣುತ್ತಿದ್ದೇವೆ. ಮಕ್ಕಳು ಅಪರಾಧ ಕಡೆಗೆ ಅವರ ಮನಸ್ಸು ಹೋಗುತ್ತಿದೆ. ಮಕ್ಕಳನ್ನು ಬಳಸಿಕೊಂಡು ಅಪರಾಧವೆಸಗುವ ಚಟುವಟಿಕೆಗಳನ್ನು ಕಾಣುತ್ತಿದ್ದು, ಹಾಗಾಗಿ ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲೆ ಹೆಚ್ಚಿದೆ. ಕಾನೂನು ಸುವ್ಯವಸ್ಥೆ ಜೊತೆಗೆ ಇದನ್ನು ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
1996ರ ಬಾಲ ನ್ಯಾಯ ಕಾಯ್ದೆಯಲ್ಲಿ 7 ಅಧ್ಯಾಯಗಳು ಹಾಗೂ 63 ಸೆಕ್ಷನ್ಗಳು ಇದ್ದವು. 2000ನೇ ಇಸವಿಯಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಲ್ಲಿ 5 ಅಧ್ಯಾಯಗಳು ಹಾಗೂ 70 ಸೆಕ್ಷನ್ಗಳನ್ನು ಅಳವಡಿಸಲಾಯಿತು. ತದನಂತರ ಬಾಲ ನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ 2015ರಲ್ಲಿ ಹಿಂದೆ ಇದ್ದ ಎರಡು ಕಾನೂನುಗಳಿಗಿಂತ ವಿಭಿನ್ನವಾಗಿ 10 ಅಧ್ಯಾಯಗಳು ಹಾಗೂ 112 ಸೆಕ್ಷನ್ಗಳನ್ನು ಅಳವಡಿಸಲಾಯಿತು ಎಂದು ನ್ಯಾಯಾಧೀಶ ರೋಣ ವಾಸುದೇವ್ ವಿವರಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬಾಲನ್ಯಾಯ ಮಂಡಳಿ ಅಧ್ಯಕ್ಷ ಉಜ್ವಲ ವೀರಣ್ಣ ಸಿದ್ದಣ್ಣವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್, ಬೆಂಗಳೂರಿನ ಎಸ್ಜೆಪಿಯು-ಸಿಐಡಿ ಪೊಲೀಸ್ ತರಬೇತುದಾರ ಸಿ.ಜಿ.ರೋಹಿತ, ಪೊಲೀಸ್ ಉಪಾಧೀಕ್ಷಕ ಹಾಗೂ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪಿ.ಕೆ.ದಿನಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಇದ್ದರು.