ಕನ್ನಡಪ್ರಭ ವಾರ್ತೆ ಮಂಡ್ಯ
ಅರುವಿ ಟ್ರಸ್ಟ್ ಮತ್ತು ವೀನಸ್ ಅಕಾಡೆಮಿ ವತಿಯಿಂದ ನಗರದ ನೂರಡಿ ರಸ್ತೆಯಲ್ಲಿರುವ ಅಕಾಡೆಮಿ ಆವರಣದಲ್ಲಿ ನಡೆದ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪೋಷಕರು ಮಕ್ಕಳಿಗೆ ಮೊಬೈಲ್ ಕೊಟ್ಟು ತಾವು ಬೇರೆ ಕಾರ್ಯಗಳಲ್ಲಿ ತೊಡಗುತ್ತಿದ್ದಾರೆ. ಮೊಬೈಲ್ ಕೊಡುವುದರಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುವುದಲ್ಲದೆ, ಅವರ ಮನಸ್ಸು ಬೇರೆಡೆಗೆ ಸೆಳೆಯುವಂತೆ ಮಾಡುತ್ತದೆ. ಅದಕ್ಕಾಗಿ ಪೋಷಕರು ಮಕ್ಕಳಿಗೆ ಹೆಚ್ಚಿನ ಸಮಯ ಕೊಡಬೇಕು. ಅವರು ಏನು ಮಾಡುತ್ತಿದ್ದಾರೆ, ಹೇಗೆ ಓದುತ್ತಿದ್ದಾರೆ ಎಂಬ ಬಗ್ಗೆಯೂ ಗಮನಹರಿಸಬೇಕು. ಪ್ರಸ್ತುತ ಪ್ರತಿಯೊಂದು ಮಗುವಿನ ಭವಿಷ್ಯವೂ ಪೋಷಕರ ಕೈಯ್ಯಲ್ಲಿದೆ ಎಂಬುದನ್ನು ಯಾರೂ ಮರೆಯಬಾರದು ಎಂದರು.ಮಕ್ಕಳು ಆಟವಾಡುವುದಕ್ಕೆ ಹಿಂದೆಲ್ಲಾ ಮಕ್ಕಳಿಗೆ ಆಟಿಕೆಗಳನ್ನು ಕೊಡುತ್ತಿದ್ದರು. ಈಗ ಪುಟ್ಟ ಮಕ್ಕಳು ಊಟ ಮಾಡುವುದಿಲ್ಲ ಎಂದರೂ ಮೊಬೈಲ್ ಕೊಡುವಂತಹ ಪ್ರವೃತ್ತಿ ಹೆಚ್ಚಾಗಿದೆ. ಇದು ಚಿಕ್ಕ ವಯಸ್ಸಿನಲ್ಲೇ ಚಟವಾಗಿ ಪರಿಣಮಿಸುತ್ತದೆ. ಮಕ್ಕಳಿಗೆ ಮೊಬೈಲ್ ಕೊಡದಿದ್ದರೆ ಅವರು ಹಠಕ್ಕೆ ಬೀಳುತ್ತಾರೆ. ಇದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅರವಿ ಟ್ರಸ್ಟ್ ಹಾಗೂ ವೀನಸ್ ಅಕಾಡೆಮಿ ಸಂಸ್ಥಾಪಕಿ ಅರುಣಾ ಈಶ್ವರ್ ಮಾತನಾಡಿ, ಮಕ್ಕಳಿಗೆ ಅನಗತ್ಯವಾದ ವಸ್ತುಗಳು, ಬಟ್ಟೆಗಳು ಇತ್ಯಾದಿಗಳನ್ನು ಅಗತ್ಯವಿಲ್ಲದಿದ್ದರೂ ನಾವು ಕೊಡಿಸುತ್ತೇವೆ. ಮಕ್ಕಳನ್ನು ಪ್ರೀತಿಸಬೇಕು. ಆದರೆ, ಅತಿಯಾದ ಪ್ರೀತಿ ಒಳ್ಳೆಯದಲ್ಲ. ಅವರ ಸುಂದರ ಭವಿಷ್ಯ ನಿರ್ಮಾಣಕ್ಕೆ ಅಗತ್ಯವಿರುವ ಶಿಕ್ಷಣಕ್ಕೆ ಪೂರಕವಾಗಿರುವ ಕೌಶಲ್ಯ ಮತ್ತು ಜ್ಞಾನವನ್ನು ಕೊಡಿಸುವ ಲೆಕ್ಕಾಚಾರ ಮಾಡಬೇಕು. ಇದರ ಪರಿಣಾಮ ಮಕ್ಕಳಿಗೆ ಒಳ್ಳೆಯ ಭವಿಷ್ಯ ಕಟ್ಟಿಕೊಡುವುದಕ್ಕೆ ಸಾಧ್ಯವಾಗುತ್ತದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಮಂಡ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಲಿಂಗು ಮಾತನಾಡಿ, ದಿನಗಳು ಕಳೆದಂತೆ ಪೋಷಕರು ಮಕ್ಕಳ ಬಾಂಧವ್ಯಗಳು ಗಟ್ಟಿತನ ಕಳೆದುಕೊಳ್ಳುತ್ತಿವೆ ಇದಕ್ಕೆ ನೈತಿಕ ಶಿಕ್ಷಣದ ಅಗತ್ಯವಿದೆ ಎಂದರು,
ಹಿರಿಯ ವಕೀಲರಾದ ಸೀತಾರಾಮ್, ಖ್ಯಾತ ಕೀಲು ಮತ್ತು ಮೂಳೆ ತಜ್ಞ ಡಾ.ರವಿಕುಮಾರ್ ಶ್ರೀಕಿಡ್ಸ್ ಸಂಸ್ಥಾಪಕ ರಕ್ಷಿತ್ರಾಜ್, ವೀನಸ್ ಅಕಾಡೆಮಿ ಶಿಕ್ಷಕರಾದ ಮಹದೇವು, ದೀಪಶ್ರೀ, ಯಶೋದಾ, ಚಂದನ್ರಾವ್, ಪ್ರೀತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.