ಸರ್ಕಾರಿ ಗೋಮಾಳ ಜಾಗ ಯಥಾಸ್ಥಿತಿ ಇರಿಸಿ: ಕರಿಬಸಪ್ಪ ಗೌಡ

KannadaprabhaNewsNetwork |  
Published : Dec 23, 2025, 01:30 AM IST
ಹೊನ್ನಾಳಿ ಫೋಟೋ 22ಎಚ್.ಎಲ್.ಐ1.ತಾಲೂಕಿನ ಸುಂಕದಕಟ್ಟೆಯ ಬೇಚಾರ ಗ್ರಾಮ ಮಲ್ಲದೇವರಕಟ್ಟೆಯ ಗೋಮಾಳವನ್ನು ಯಥಾಸ್ಥಿತಿಯಲ್ಲಿಯೇ ಉಳಿಸಬೇಕು ಎಂದು ಉಪವಿಭಾಗಾಧಿಕಾರಿಗಳಿಗೆ, ಶಾಸಕ ಡಿ.ಜಿ. ಶಾಂತನಗೌಡ ಅವರಿಗೆ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಹಾಗೂ ಸುಂಕದಕಟ್ಟೆ ಗ್ರಾಮಸ್ಥರು ಸೇರಿ  ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ತಾಲೂಕಿನ ಸುಂಕದಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಬರುವ ಬೇಚಾರ ಗ್ರಾಮ ಮಲ್ಲದೇವರಕಟ್ಟೆಯ ಸರ್ವೇ ನಂ. 4 ಮತ್ತು 7 ರಲ್ಲಿ ಗ್ರಾಮದ ದನಕರುಗಳಿಗೆ ಕಾಯ್ದಿರಿಸಿದ 29.37 ಎಕರೆ ವಿಸ್ತೀರ್ಣದ ಗೋಮಾಳವನ್ನು ಹೊನ್ನಾಳಿಯ ನಿವೇಶನ ರಹಿತರಿಗೆ ಮಂಜೂರು ಮಾಡಿರುವುದನ್ನು ರದ್ದುಪಡಿಸಿ ಸರ್ಕಾರಿ ಗೋಮಾಳವನ್ನಾಗಿ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಅಧ್ಯಕ್ಷ ಕರಿಬಸಪ್ಪ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ತಾಲೂಕಿನ ಸುಂಕದಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಬರುವ ಬೇಚಾರ ಗ್ರಾಮ ಮಲ್ಲದೇವರಕಟ್ಟೆಯ ಸರ್ವೇ ನಂ. 4 ಮತ್ತು 7 ರಲ್ಲಿ ಗ್ರಾಮದ ದನಕರುಗಳಿಗೆ ಕಾಯ್ದಿರಿಸಿದ 29.37 ಎಕರೆ ವಿಸ್ತೀರ್ಣದ ಗೋಮಾಳವನ್ನು ಹೊನ್ನಾಳಿಯ ನಿವೇಶನ ರಹಿತರಿಗೆ ಮಂಜೂರು ಮಾಡಿರುವುದನ್ನು ರದ್ದುಪಡಿಸಿ ಸರ್ಕಾರಿ ಗೋಮಾಳವನ್ನಾಗಿ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಅಧ್ಯಕ್ಷ ಕರಿಬಸಪ್ಪ ಗೌಡ ಹೇಳಿದರು.

ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಶಾಸಕ ಡಿ.ಜಿ. ಶಾಂತನಗೌಡರಿಗೆ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹಾಗೂ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಕಳೆದ ಐದು ವರ್ಷಗಳ ಹಿಂದೆ ವ್ಯಾಪಿಸಿದ್ದ ಕೊರೋನಾ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಆಸರೆಯಾಗಿದ್ದ ಗೋಮಾಳದ ಜಮೀನನ್ನು ಹೊನ್ನಾಳಿಯ ನಿವೇಶನ ರಹಿತರಿಗೆ ಮಂಜೂರು ಮಾಡಿರುವುದು ಅತ್ಯಂತ ಖಂಡನೀಯ ಎಂದರು. ಸರ್ಕಾರಿ ಜಮೀನನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಗಳಿಗೆ ಬಳಕೆ ಮಾಡಬಾರದು ಎಂಬ ಸರ್ಕಾರದ ಆದೇಶ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿ ಗೋಮಾಳದ ಜಮೀನನ್ನು ನಿವೇಶನರಹಿತರಿಗೆ ಮಂಜೂರು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು.

ಗ್ರಾಮದ ರೈತ ಮುಖಂಡ ಕರಿಬಸಪ್ಪ ಮಾತನಾಡಿ, ಇಲ್ಲಿ ಬೆಳೆದಿರುವ ಗಿಡಮರಗಳನ್ನು ಕಡಿದು ನಿವೇಶನ ಮಾಡಲು ಅನುಮತಿ ಕೊಡುವ ಅಧಿಕಾರಿಗಳ ವಿರುದ್ಧ, ಮರಗಳನ್ನು ಕಡಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಗ್ರಾಮದ ಯುವ ಮುಖಂಡ ಎಚ್.ಕೆ.ನರಸಿಂಹಮೂರ್ತಿ ಮಾತನಾಡಿ, ಸಾರ್ವಜನಿಕರು ಕೃಷಿ ಚಟುವಟಿಕೆಗಳಿಗೆ ಒಂದು ಗಿಡಮರ ಕಡಿದರೆ ಕೇಸ್ ಹಾಕಿ ಜೈಲಿಗೆ ಕಳಿಸುತ್ತಾರೆ. ಆದರೆ ಇಲ್ಲಿ ಸರ್ಕಾರಿ ಅಧಿಕಾರಿಗಳೇ ಕಾನೂನು ಉಲ್ಲಂಘನೆ ಮಾಡಿ, ಅನುಮತಿ ಕೊಡುವುದಕ್ಕೆ ಮುಂದಾಗಿರುವುದು ಅಕ್ಷಮ್ಯ ಎಂದರು.

ಆದ್ದರಿಂದ ಉಪವಿಭಾಗಾಧಿಕಾರಿಗಳು, ಶಾಸಕ ಡಿ.ಜಿ. ಶಾಂತನಗೌಡ ಅವರು, ಗ್ರಾಮಸ್ಥರ ಅನುಕೂಲಕ್ಕಾಗಿ ಇರುವ ಈ ಗೋಮಾಳವನ್ನು ಯಥಾಸ್ಥಿತಿಯಲ್ಲಿ ಗ್ರಾಮದ ಜನತೆಗೆ ಬಿಡಬೇಕು, ನಿವೇಶನ ಮಾಡುವ ಕುರಿತು ಯಾವುದೇ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದರು.

ಗ್ರಾಪಂ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಡಿ.ಬಿ.ಶ್ರೀನಾಥ್, ರೈತಸಂಘದ ತಾಲೂಕು ಅಧ್ಯಕ್ಷ ಕೆ.ಸಿ.ಬಸಪ್ಪ, ಬೆಳಗುತ್ತಿಯ ಉಮೇಶ್, ಹನಗವಾಡಿಯ ರಮೇಶ್, ಎಸ್.ಕೆ.ಕರಿಯಪ್ಪ, ಅನಂತಯ್ಯ, ರಂಗನಾಥ್, ರುದ್ರಪ್ಪ, ಎಸ್.ಆರ್.ಹನುಮಂತಪ್ಪ, ಚನ್ನಬಸಪ್ಪ, ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆ ಹೋಗಲಾಡಿಸಿ: ಪೂರ್ಣಿಮಾ
ಬಡವರಿಗೆ ನಲ್ಲೂರು ಕುಟುಂಬ ಕೊಡುಗೆ ಅಪಾರ: ಓಂಕಾರ ಶ್ರೀ