ಕನ್ನಡಪ್ರಭ ವಾರ್ತೆ ಮಂಡ್ಯ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಗರಣದಿಂದ ಪ್ರಸ್ತುತ ಲೋಕಸಭಾ ಚುನಾವಣೆ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಗಳಿವೆ. ತಕ್ಷಣ ಜೆಡಿಎಸ್ನಿಂದ ಮೈತ್ರಿ ಹೊರಬರಬೇಕು ಎಂದು ಆಗ್ರಹಿಸಿದರು.
ಹಾಸನದ ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ಈ ಪ್ರಕರಣದ ಮುಜುಗರ ತಪ್ಪಿಸುವ ಸಲುವಾಗಿ ವರಿಷ್ಠರು ಈಗಾಗಲೇ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಹಾಗಾಗಿ ಬಿಜೆಪಿ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಬಲೆಯರ ನೆರವಿಗೆ ಧಾವಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗುವಂತೆ ಹೋರಾಟ ರೂಪಿಸಬೇಕು. ಯಾವುದೇ ವಿಚಾರವಾದರೂ ಎಚ್ಡಿಕೆ ದಿಢೀರನೇ ಹೋರಾಟಕ್ಕೆ ಇಳಿಯುತ್ತಾರೆ. ಹಾಸನದ ಪ್ರಕರಣದಲ್ಲಿ ಕೇವಲ ವಿಪಕ್ಷಗಳ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ನೈಜ ಹೋರಾಟಕ್ಕೆ ಇಳಿಯಲಿ ಎಂದು ಸಲಹೆ ನೀಡಿದರು.
ಹಾಸನದಲ್ಲಿ ಈ ಕುಟುಂಬ ಸದಸ್ಯನಿಂದ ಹೆಣ್ಣು ಮಕ್ಕಳು ಹೇಗೆ ನೊಂದಿದ್ದಾರೋ ಅದೇ ರೀತಿ ಒಕ್ಕಲಿಗ ನಾಯಕರು ತುಳಿತಕ್ಕೊಳಗಾಗಿದ್ದಾರೆ. ನಾವೂ ನೊಂದಿದ್ದೇವೆ. ಕಾರಣ ಕುಮಾರಸ್ವಾಮಿ ಅವರು ಆ ನೊಂದ ಮಹಿಳೆಯರಿಗೆ ಸಾಂತ್ವನ ಹೇಳುವ ಕೆಲಸ ಮಾಡಬೇಕು ಎಂದರು.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡುವುದು ಬೇಡ ಎಂದು ಅಮಿತ್ ಶಾ ಹೇಳಿದ್ದರು. ಆದರೆ, ಪ್ರಧಾನಿ ಮೋದಿಯವರು ಕೇಳಲಿಲ್ಲ. ಈತನನ್ನು ನಂಬಿ ಟಿಕೆಟ್ ಕೊಟ್ಟು ಅಪಮಾನ ಮಾಡಿಸಿಕೊಂಡಂತಾಗಿದೆ ಎಂದು ಜರಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹೇಮಂತರಾಜು, ಚೇತನ, ಕೊಪ್ಪ ರಮೇಶ್, ನಾಗರಾಜು, ವಕೀಲ ಉಮೇಶ್ ಇದ್ದರು.
ನನಗೇನು ಕೊಟ್ಟರು..?
ಕೇವಲ ಬಾಯಿ ಮಾತಿಯಿಂದ ಆಡಿದ ಸಣ್ಣ ತಪ್ಪುನ್ನು ಗಮನಿಸಿ ಅರ್ಧ ಗಂಟೆಯಲ್ಲೇ ನನ್ನನ್ನು ಪಕ್ಷದಿಂದ ಹೊರ ಹಾಕಿದರು. ಇಂತಹ ದೊಡ್ಡ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ಅಮಾನತ್ತಿಗೆ ಸಭೆ ಮಾಡಿ ನಂತರ ತೀರ್ಮಾನ ಮಾಡಿದ್ದಾರೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ತಂದೆ-ಮಗ ಇಬ್ಬರೂ ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿದ್ದಾರೆ. ರೇವಣ್ಣ ಅವರು ಒಳ್ಳೆಯ ನಡವಳಿಕೆಯ ವ್ಯಕ್ತಿಯಲ್ಲ. ಪ್ರಜ್ವಲ್ ಇಷ್ಟೆಲ್ಲಾ ಮಾಡುವಾಗ ಅಪ್ಪ- ಅಮ್ಮ ಕತ್ತೆ ಕಾಯುತ್ತಿದ್ದರಾ?. ಸಂತ್ರಸ್ಥೆಯೊಬ್ಬರು ಹೇಳಿರುವಂತೆ ಮಗ ಒಂದು ಕಡೆ, ಅಪ್ಪ ಒಂದು ಕಡೆ ಹೋಗುತ್ತಿದ್ದರು ಎಂದಿದ್ದಾರೆ. ಇದೆಲ್ಲಾ ಸುಳ್ಳಾ?.