ಕನ್ನಡಪ್ರಭ ವಾರ್ತೆ ಇಂಡಿ
ತಾಲೂಕಿನ ಚಿಕ್ಕಬೇವನೂರ ವಲಯದ ತಡವಲಗಾ ಕಾರ್ಯಕ್ಷೇತ್ರದ ಬಂದಗೋಕುಲ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಪ್ರಾಣಿ, ಪಕ್ಷಿ ಸಂಕುಲ ಉಳಿವಿಗಾಗಿ ಜೀವಜಲ ನೀಡಿ ಅಭಿಯಾನದಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತವೆ. ಪಕ್ಷಿಗಳಿಗೆ ಹುಡುಕಿದರೂ ಗುಟುಕು ನೀರು ದೊರೆಯದ ಬೇಸಿಗೆ ಕಾಲದಲ್ಲಿ ಅವುಗಳ ಜೀವ ಉಳಿವಿಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಮೇಲೆ ಇಲ್ಲವೆ ಮನೆಯ ಹಿತ್ತಲುಗಳಲ್ಲಿ ಇರುವ ಗಿಡ, ಮರಗಳಲ್ಲಿ ನೀರಿನ ತೊಟ್ಟೆ ಇಟ್ಟು ನೀರು ಧಾನ್ಯ ಹಾಕಬೇಕು ಎಂದರು. ಪ್ರಾಣಿ, ಪಕ್ಷಿಗಳ ಉಳಿವಿಗೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಬೇಸಿಗೆಯಲ್ಲಿ ಮಧ್ಯಾಹ್ನ ಹೊರಗೆ ಬರಲಾರದಷ್ಟು ಬಿಸಿಲು ಪ್ರಖರವಾಗಿರುತ್ತದೆ. ನಮ್ಮ ನಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ ಎಂದರು.
ಮಣ್ಣಿನ ಪಾತ್ರೆಗಳಲ್ಲಿ ಪಕ್ಷಿಗಳಿಗೆ ನೀರು ಹಾಕಿಡಿ, ಬೇಸಿಗೆಯಲ್ಲಿ ನೀರಿನ ಅಭಾವ ಎಲ್ಲ ಕಡೆ ಕಾಣುತ್ತೇವೆ. ಕೆರೆ, ಹಳ್ಳ ಕೊಳ್ಳಗಳು ಬತ್ತುವುದರಿಂದ ಪಕ್ಷಿಗಳು ನೀರು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತವೆ. ಅದಕ್ಕೆ ನಾವು ಇಟ್ಟ ನೀರಿನಿಂದ ಪಕ್ಷಿಗಳ ಜೀವ ಉಳಿಸಲು ಸಾಧ್ಯವಾಗುತ್ತದೆ.ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾನವೀಯ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗೆ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವ ಕೆಲಸ ಮಾಡಬೇಕು ಎಂದು ಹೇಳಿದರು.