ಕನ್ನಡಪ್ರಭ ವಾರ್ತೆ ಇಂಡಿ
ಅವರು ನಗರದ ವಾರ್ಡ್ 19 ರಲ್ಲಿ ಯಶವಂತರಾಯಗೌಡ ವಿ ಪಾಟೀಲ ಫೌಂಡೇಶನ್ ಹಮ್ಮಿಕೊಂಡ ಹಕ್ಕಿಗೊಂದು ಹನಿ ನೀರು ಅಭಿಯಾನ -2026 ಕ್ಕೆ ಚಾಲನೆ ನೀಡಿ ಮಾತನಾಡಿದರು. ಸಾವಳಸಂಗ, ಬಬಲಾದ, ಜೇವೂರ ಹಾಗೂ ಇಂಡಿ ಸೇರಿದಂತೆ ಹಲವು ಕಡೆಗಳಲ್ಲಿ ಅರಣ್ಯ ಇಲಾಖೆ ಗಿಡ ಮರಗಳನ್ನು ಬೆಳೆಸುವುದರ ಜೊತೆ ಅರಣ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಸಂತಸದ ಸಂಗತಿ ಎಂದರು.
ಕೇವಲ ಅರಣ್ಯ ಇಲಾಖೆ ಗಿಡ, ಮರ ಬೆಳೆಸುವುದು, ಪ್ರಕೃತಿ ರಕ್ಷಣೆ ಮಾಡುವ ಕೆಲಸವಲ್ಲ. ಪ್ರತಿಯೊಬ್ಬರು ಪ್ರಕೃತಿಯನ್ನು ರಕ್ಷಿಸಬೇಕು. ಪ್ರತಿ ಮನೆಯ ಮುಂದೊಂದು ಗಿಡ ನೆಡುವ ಕೆಲಸ ಮಾಡಬೇಕು. ಬೇಸಿಗೆ ಇರುವುದರಿಂದ ನಮ್ಮಂತೆ ಪ್ರಾಣಿ, ಪಕ್ಷಿಗಳಿಗೂ ನೀರು ಅವಶ್ಯಕ. ಹೀಗಾಗಿ ಮನೆಯ ಮೇಲೆ, ಮರಗಳಲ್ಲಿ ನೀರಿನ ತೊಟ್ಟಿ ಇಟ್ಟು ಪಕ್ಷಿಗಳಿಗೆ ನೀರಿನ ದಾಹ ತೀರಿಸಿಕೊಳ್ಳಲು ಸಹಾಯ ಮಾಡಬೇಕು ಎಂದು ಹೇಳಿದರು.ಬೇಸಿಗೆಯ ತೀವ್ರ ಬೀಸಿಲಿನ ತಾಪಕ್ಕೆ ಪ್ರಾಣಿ, ಪಕ್ಷಿಗಳು ಕುಡಿಯಲು ನೀರಿನಿಂದ ತೊಂದರೆ ಅನುಭವಿಸುತ್ತಿದ್ದು, ಅವುಗಳ ಬಾಯಾರಿಕೆ ನೀಗಿಸಲು ಯಶವಂತರಾಯಗೌಡ ವಿ ಪಾಟೀಲ ಫೌಂಡೇಶನ್ದಿಂದ ನಗರದ ವಿವಿಧ ವಾರ್ಡ್ಗಳಲ್ಲಿ ನೀರಿನ ತೊಟ್ಟಿಗಳು ಮರಗಳಿಗೆ ಕಟ್ಟಿ ನೀರು ಇಡುವ ಕೆಲಸ ಮಾಡುತ್ತಿದ್ದು, ಇದಕ್ಕೆಲ್ಲಾ ನಮ್ಮ ಫೌಂಡೇಶನ್ ಸದಸ್ಯರು, ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಪುರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ, ನೀಲಕಂಠಗೌಡ ಪಾಟೀಲ, ಸುಧೀರ ಕರಕಟ್ಟಿ, ಸತೀಶ ಹತ್ತಿ, ಅವಿನಾಶ ಬಗಲಿ, ಸತೀಶ ಕುಂಬಾರ, ಸಣ್ಣಪ್ಪ ತಳವಾರ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.