ಬೆಂಗಳೂರಿನ ವಿಖ್ಯಾತಿಗೆ ಕೆಂಪೇಗೌಡರೇ ಕಾರಣ

KannadaprabhaNewsNetwork |  
Published : Jun 29, 2026, 01:30 AM IST
28ಎಚ್ಎಸ್ಎನ್5 :  | Kannada Prabha

ಸಾರಾಂಶ

ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ದುಡಿದ ಮಹಾನ್ ವ್ಯಕ್ತಿ. ಅವರ ದೂರದೃಷ್ಟಿ ಹೊಂದಿ ಕಟ್ಟಿದ ಬೆಂಗಳೂರು ಇಂದು ವಿಶ್ವದ ಗಮನ ಸೆಳೆಯುತ್ತಿದೆ. ಶೇ.೬೫ರಷ್ಟು ತೆರಿಗೆ ಸಂಗ್ರಹವಾಗುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕಾರಣವಾಗಿದೆ. ಕೆರೆಕಟ್ಟೆಗಳನ್ನು ಕಟ್ಟಿ, ಶಿಕ್ಷಣ, ವ್ಯಾಪಾರಕ್ಕೆ ಆದ್ಯತೆ ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ಕೆಂಪೇಗೌಡರು ಕಾರಣವಾಗಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಪ್ರಪಂಚದಲ್ಲೇ ಅತ್ಯುನ್ನತ ನಗರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರ ಆಶೀರ್ವಾದ ಪ್ರಮುಖವಾಗಿದೆ. ದೇಶದಲ್ಲಿ ಪ್ರಮುಖ ನಗರವಾಗಿ ಹೊರಹೊಮ್ಮಿದ ಕೀರ್ತಿ ಬೆಂಗಳೂರಿನದು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ದುಡಿದ ಮಹಾನ್ ವ್ಯಕ್ತಿ. ಅವರ ದೂರದೃಷ್ಟಿ ಹೊಂದಿ ಕಟ್ಟಿದ ಬೆಂಗಳೂರು ಇಂದು ವಿಶ್ವದ ಗಮನ ಸೆಳೆಯುತ್ತಿದೆ. ಶೇ.೬೫ರಷ್ಟು ತೆರಿಗೆ ಸಂಗ್ರಹವಾಗುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕಾರಣವಾಗಿದೆ. ಕೆರೆಕಟ್ಟೆಗಳನ್ನು ಕಟ್ಟಿ, ಶಿಕ್ಷಣ, ವ್ಯಾಪಾರಕ್ಕೆ ಆದ್ಯತೆ ಪ್ರತಿಯೊಂದು ಸಮುದಾಯದ ಅಭಿವೃದ್ಧಿಗೆ ಕೆಂಪೇಗೌಡರು ಕಾರಣವಾಗಿದ್ದಾರೆ ಎಂದರು.ತಹಸೀಲ್ದಾರ್‌ ಶಂಕರಪ್ಪ ಮಾತನಾಡಿ, ವಿಜಯನಗರದ ಸಾಮಂತ ಪ್ರಭುವಾಗಿ ಕೆಂಪೇಗೌಡರು ಸುಸಜ್ಜಿತವಾಗಿ ಬೆಂಗಳೂರು ಕಟ್ಟಿದ್ದಾರೆ. ಕಟ್ಟಿದ ನಗರದಲ್ಲಿ ವಾಸಿಸುವ ಜನ, ಪ್ರಾಣಿ, ಪಕ್ಷಿಗಳು, ಕೃಷಿಗೆ ನೀರಿನ ಕೊರತೆ ಕಾಡದಂತೆ ಕೆರೆಕಟ್ಟೆಗಳನ್ನು ವೈಜ್ಞಾನಿಕವಾಗಿ ಕಟ್ಟಿ ಇಂದಿಗೂ ನವಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಆದರ್ಶ ತತ್ವಗಳನ್ನು ಪಾಲಿಸುವ ಮೂಲಕ ಅವರ ಹಾದಿಯಲ್ಲಿ ಎಲ್ಲರೂ ಸಾಗೋಣವೆಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್. ಎನ್. ಲೋಕೇಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಆನಂದ್ ಕಾಳೆನಹಳ್ಳಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್. ಪಿ. ಪ್ರಕಾಶ್‌ಗೌಡ, ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು, ಪರಿಸರ ಪ್ರೇಮಿ ಚ.ನಾ. ಅಶೋಕ್, ಟಿಎಪಿಸಿಎಂಎಸ್‌ನ ಅಧ್ಯಕ್ಷ ವೆಂಕಟೇಶಮೂರ್ತಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ವಿ. ಜಯಪಾಲ್, ಚನ್ನರಾಯಪಟ್ಟಣ ಉಪವಿಭಾಗ ಪೊಲೀಸ್ ಉಪಅಧೀಕ್ಷಕ ಎನ್.ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ. ಆರ್‌.ಹರೀಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಿಯೋ ಮುಕ್ತ ದೇಶಕ್ಕೆ ಎಲ್ಲರ ಸಹಕಾರ ಅಗತ್ಯ
ಚುಟುಕು ಸಾಹಿತ್ಯ ಸಮಾಜಕ್ಕೆ ಮೌಲ್ಯಯುತ ಸಂದೇಶ ನೀಡುತ್ತದೆ