ವಿಶ್ವದ ಭೂಪಟದಲ್ಲಿ ಬೆಂಗಳೂರು ರಾರಾಜಿಸಲು ಕೆಂಪೇಗೌಡರು ಕಾರಣ: ಕೃಷ್ಣೇಗೌಡ

KannadaprabhaNewsNetwork |  
Published : Jun 28, 2025, 12:21 AM IST
27ಕೆಎಂಎನ್ ಡಿ30 | Kannada Prabha

ಸಾರಾಂಶ

ಒಂದು ಸಾಮಾನ್ಯ ನಗರವಾಗಿದ್ದ ಬೆಂಗಳೂರನ್ನು ವಿಶ್ವದ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ನಾಡಿನ ಭವಿಷ್ಯದ ಬಗ್ಗೆ ಅಪಾರ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಜನಪರ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ನೆಲಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಲಗೂರು

ಒಂದು ಸಾಮಾನ್ಯ ನಗರವಾಗಿದ್ದ ಬೆಂಗಳೂರನ್ನು ವಿಶ್ವದ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ರೈತ ಮುಖಂಡ ಕೃಷ್ಣೇಗೌಡ ತಿಳಿಸಿದರು.

ಹಲಗೂರು ಗ್ರಾಪಂ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿ, ನಾಡಿನ ಭವಿಷ್ಯದ ಬಗ್ಗೆ ಅಪಾರ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಜನಪರ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ನೆಲಸಿದ್ದಾರೆ ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಆರ್.ಶಶಿಕಲಾ, ಸದಸ್ಯರಾದ ಎಚ್.ಕೆಮೂರ್ತಿ, ವಂದ್ರಿ ಬಾಬು, ರವೀಶ್, ಆನಂದ್, ಶಶಿಕುಮಾರ್, ಶಿವಲಿಂಗೇಗೌಡ, ಈರೇಶ್, ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಎಚ್.ಬಿ.ರವಿ, ಬಿ.ಕೆ.ಲಿಂಗರಾಜು, ಶಿವಣ್ಣ, ಮಹಮದ್ ಸಲೇಹಾ, ಗಂಗಾಧರ್, ಸದಾಶಿವ, ಭಾಸ್ಕರ್ ಸೇರಿದಂತೆ ಹಲವರು ಇದ್ದರು.

ಆಷಾಢ ಮಾಸದ ಶುಕ್ರವಾರ ಗ್ರಾಮ ದೇವತೆಗೆ ವಿಶೇಷ ಪೂಜೆ

ಹಲಗೂರು:

ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಗ್ರಾಮದೇವತೆ ಪಟ್ಟಲದಮ್ಮನ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ನಡೆಯಿತು.

ಅರ್ಚಕ ಕೃಷ್ಣಪ್ಪ ಶುಕ್ರವಾರ ಬೆಳಗ್ಗೆಪಟ್ಟಲದಮ್ಮ ದೇವಿಗೆ ಪಂಚಾಮೃತ ಅಭಿಷೇಕ ಹಾಲಿನ ಅಭಿಷೇಕ ನಡೆಸಿ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಹಾ ಮಂಗಳಾರತಿ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.

ಹಲಗೂರು ಮತ್ತು ವಳಗೆರೆದೊಡ್ಡಿ ಗ್ರಾಮದೇವತೆ ಪಟ್ಟಲದಮ್ಮ ದೇವಿ ಸನ್ನಿಧಿಯಲ್ಲಿ ಪ್ರತಿವರ್ಷ ಕೊಂಡೋತ್ಸವವನ್ನು ನಡೆಸಲಾಗುತ್ತದೆ. ಹಾಗೂ ಆಷಾಢ ಮಾಸದ ಪ್ರತಿ ಶುಕ್ರವಾರ ಹಾಗೂ ಮಂಗಳವಾರ ವಿಶೇಷ ಪೂಜೆಗಳು ನಡೆಯುತ್ತವೆ ಎಂದು ಅರ್ಚಕ ಕೃಷ್ಣಪ್ಪ ತಿಳಿಸಿದರು.

ದೇವರ ಭಕ್ತರಾದ ಎಚ್.ಎಂ.ಆನಂದ್ ಕುಮಾರ್ ಮಾತನಾಡಿ, ಭಕ್ತರ ಕಷ್ಟ ಕಾರ್ಪಣ್ಯ ನಿವಾರಿಸುತ್ತಾ ಶಕ್ತಿ ದೇವತೆಯಾಗಿರುವ ಪಟ್ಟಲದಮ್ಮ ದೇವಿ ಅಪಾರ ಭಕ್ತರನ್ನು ಒಳಗೊಂಡಿದೆ ಎಂದರು.

ಹರಕೆ ಹೊತ್ತುಕೊಂಡಿದ್ದ ಭಕ್ತರು ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಬಂದ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ಪರಸ್ಪರ ವಿನಿಮಯ ಮಾಡಿಕೊಂಡು ಹೆಸರುಬೇಳೆ ಪಾನಕ ಹಂಚಿ ದೇವರ ಕೃಪೆಗೆ ಪಾತ್ರರಾದರು.

ಹಲಗೂರಿನ ಕಾಳಿಕಾಂಬ, ಗುಂಡಾಪುರದ ಬೆಟ್ಟದರಸಮ್ಮ ಹಾಗೂ ಹೆಬ್ಬೆಟ್ಟದ ಬಸವೇಶ್ವರ ದೇವಸ್ಥಾನದ ಸನ್ನಿಧಿಗಳಲ್ಲಿ ಆಷಾಢ ಮಾಸದ ವಿಶೇಷ ಪೂಜೆಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸುಗ್ಗಿ ಸಂಕ್ರಾಂತಿ
ಕೆರೂರು ಗ್ರಾಮಸ್ಥರಿಂದ ರಸ್ತೆ ಅತಿಕ್ರಮಣ ತೆರವಿಗೆ ಗಡುವ ನಿಗದಿ