ಕನ್ನಡಪ್ರಭವಾರ್ತೆ ಪಾಂಡವಪುರ
ಗ್ರಾಪಂ ಮಾಜಿ ಅಧ್ಯಕ್ಷ ರವಿ ಮಾತನಾಡಿ, ದೇಶ ಕಂಡ ಅಪ್ರತಿಮ ನಾಯಕ, ಉತ್ತಮ ಆಡಳಿತಗಾರರಾಗಿ, ವಿಜಯ ನಗರ ಸಾಮ್ರಾಜ್ಯದ ಸಾಮಾಂತ ರಾಜನಾಗಿದ್ದ ಕೆಂಪೇಗೌಡರು ಚಿಕ್ಕವಯಸ್ಸಿನಿಂದಲೂ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಕಣ್ಣಾರೆ ಕಂಡು ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದರು ಎಂದರು.
ಇಂದು ಬೆಂಗಳೂರು ನಗರ ಎಲ್ಲದರೂ ಸಾಕಷ್ಟು ಬೆಳದಿದೆ. ಬೆಂಗಳೂರಿನಲ್ಲಿ ಎಲ್ಲಾ ಜಾತಿ, ಧರ್ಮ, ಜನಾಂಗದ ಕೋಟ್ಯಂತರ ಜನರು ಬದುಕು ನಡೆಸುತ್ತಿದ್ದಾರೆ ಎಂದರು.ಮುಖ್ಯಶಿಕ್ಷಕ ಶ್ರೀನಿವಾಸ್ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣ ಮಾಡಿ ನಾಲ್ಕು ದಿಕ್ಕುಗಳಲ್ಲೂ ಕೋಟೆಗಳನ್ನು ನಿರ್ಮಿಸಿದರು. ಇಂದು ಬೆಂಗಳೂರು ನಾಲ್ಕು ದಿಕ್ಕಿನ ಕೋಟೆಗಳನ್ನು ಮೀರಿ ದೊಡ್ಡಮಟ್ಟದಲ್ಲಿ ಬೆಳೆದಿದೆ, ಆದರೆ, ನಾಡಪ್ರಭುಗಳು ನಿರ್ಮಿಸಿದ್ದ ಪ್ರಸ್ತುತ ಕೆರೆ-ಕಟ್ಟೆಗಳು, ರಾಜಕಾಲುವೆಗಳನ್ನು ಮುಚ್ಚಿರುವುದಕ್ಕೆ ವಿಷಾದಿಸಿದರು.
ಇಂದು ಪಟ್ಟಣಕ್ಕೆ ನಿಖಿಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಕೆ.ಆರ್.ಪೇಟೆ: ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 1 ರಂದು ಪಟ್ಟಣಕ್ಕೆ ಆಗಮಿಸಲಿದ್ದು, ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ನೇತೃತ್ವದಲ್ಲಿ ಯುವ ನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರು ನಿರ್ಧರಿಸಿದ್ದು, ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೆರವಣಿಗೆ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ನಿಖಿಲ್ ಅವರನ್ನು ಕರೆದೊಯ್ಯಲು ತೀರ್ಮಾನಿಸಿದ್ದಾರೆ.