ಕೆಂಪೇಗೌಡರನ್ನು ಜಾತ್ಯಾತೀತ ತತ್ತ್ವದಡಿ ನೋಡಬೇಕು: ಡಾ. ದೊರೇಶ್‌ ಬಿಳಿಕೆರೆ

KannadaprabhaNewsNetwork |  
Published : Jun 28, 2024, 12:51 AM IST
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು ಎಂದು ಬಾಣಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದೊರೇಶ್‌ ಬಿಳಿಕೆರೆ ಹೇಳಿದರು.ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ನಮ್ಮಂತೆ ಎಲ್ಲರೂ ಬದುಕಬೇಕೆಂಬುದನ್ನು ತೋರಿಸಿಕೊಟ್ಟವರು ಕೆಂಪೇಗೌಡರು ಎಂದರು.

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಕೆಂಪೇಗೌಡ ಜಯಂತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು ಎಂದು ಬಾಣಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದೊರೇಶ್‌ ಬಿಳಿಕೆರೆ ಅವರು ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ನಮ್ಮಂತೆ ಎಲ್ಲರೂ ಬದುಕಬೇಕೆಂಬುದನ್ನು ತೋರಿಸಿಕೊಟ್ಟವರು ಕೆಂಪೇಗೌಡರು ಎಂದರು.

ಮಹಾ ಗುರು ಡಾ. ಬಾಲಗಂಗಾಧರ ಮಹಾಸ್ವಾಮೀಜಿ, ಮಹಾರಾಜ ಕೆಂಪೇಗೌಡ, ಮಹಾ ಕವಿ ಕುವೆಂಪುರನ್ನು ಈ ನಾಡಿಗೆ ಕೊಡಗೆಯಾಗಿ ನೀಡಿರುವ ಒಕ್ಕಲಿಗ ಸಮುದಾಯ ಶ್ರೇಷ್ಠ ಪರಂಪರೆ ಹೊಂದಿದೆ. ಜಯಂತಿಗಳ ಮೂಲ ಉದ್ದೇಶ ನಮ್ಮನ್ನು ನಾವು ಅರಿಯಲು, ಚರಿತ್ರೆ ತಿಳಿದುಕೊಳ್ಳಲು ಎಂದು ಹೇಳಿದರು.

ವಿಶ್ವಮಾನವ ಪ್ರಜ್ಞೆ ಕೆಂಪೇಗೌಡರಲ್ಲಿ ಇತ್ತು. ಒಂದು ರಾಜಧಾನಿ ಭದ್ರವಾಗಿ ಇರಬೇಕಾದರೆ ಅಲ್ಲಿ ಏನೆಲ್ಲಾ ಇರಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಹಾಗಾಗಿ ಆಗಿನ ಕಾಲದಲ್ಲಿ ಕಾರ್ಖಾನೆ ಸ್ಥಾಪನೆ ಮಾಡಿದರು. ವ್ಯಾಪಾರ ವಹಿವಾಟಿಗೂ ಅವಕಾಶ ನೀಡಿದ್ದರು. ಹೀಗೆ ಎಲ್ಲ ಸಮುದಾಯದವರಿಗೆ ಸಮಾನ ಅವಕಾಶ ನೀಡಿದ್ದರು. ರೈತರು, ಬಡವರು, ಶ್ರೀಮಂತರೆಂಬ ಬೇಧ ಮಾಡುತ್ತಿರಲಿಲ್ಲ ಎಂದು ಹೇಳಿದರು.

ಇಂದು, ಬೆಂಗಳೂರು ಇಡೀ ಪ್ರಪಂಚ ಗುರುತಿಸುವ ಮಟ್ಟದಲ್ಲಿ ಬೆಳೆದು ನಿಂತಿದೆ. ಇದಕ್ಕೆ ಮೂಲ ಕಾರಣ ಕೆಂಪೇಗೌಡ ಎಂಬುದನ್ನು ಯಾರೂ ಕೂಡ ಮರೆಯಲು ಸಾಧ್ಯವಿಲ್ಲ. ಈಗಿನ ಮಾಲ್‌ ಸಂಸ್ಕೃತಿ ಹುಟ್ಟಿದ್ದು ಕೆಂಪೇಗೌಡರ ಕಾಲದಲ್ಲಿ, ಜಾತಿ, ಧರ್ಮ, ವರ್ಣದ ಹೆಸರಿನಲ್ಲಿ ಅವರ ಕಾಲದಲ್ಲಿ ತಾರತಮ್ಯ ಮಾಡುತ್ತಿರಲಿಲ್ಲ ಎಂದ ಅವರು, ಬೆಂಗಳೂರು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದರು.

ಕೋಟೆ, ಪೇಟೆ, ಕೆರೆ, ಗುಡಿ, ಗುರಿ ಅವರ ಪರಿಕಲ್ಪನೆಯಾಗಿತ್ತು. ಒಂದು ನಗರ ಇದೇ ಮಾದರಿಯಲ್ಲಿ ಇರಬೇಕೆಂಬುದು ಅವರ ಆಶಯವಾಗಿತ್ತು ಎಂದ ಅವರು, ಇಂತಹ ಕಾರ್ಯಕ್ರಮಗಳು ತೋರ್ಪಡೆಗೆ ಇರಬಾರದು, ಆದರ್ಶ ವೇದಿಕೆ ಯಾಗಬೇಕು. ಕೆಂಪೇಗೌಡರ ಆದರ್ಶ ಗುಣಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು, ವಿದ್ಯಾರ್ಥಿಗಳು ಚರಿತ್ರೆ, ದಂತ ಕಥೆ ಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ತ್ಯಾಗ, ಧರ್ಮ, ನಂಬಿಕೆ, ಪ್ರಾಮಾಣಿಕತೆ, ದೂರದೃಷ್ಟಿ ವ್ಯಕ್ತಿತ್ವ ಹೊಂದಿದ ಸಮುದಾಯ ಒಕ್ಕಲಿಗ, ಸಮ ಸಮಾಜದ ತತ್ತ್ವಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ನಾಡಪ್ರಭು ಕೆಂಪೇಗೌಡ ದೂರ ದೃಷ್ಟಿಯ ನಾಯಕರು. ಬೆಂಗಳೂರು ಪ್ರಪಂಚದಲ್ಲಿ ಗುರುತಿಸಿಕೊಳ್ಳಲು ಕಾರಣ ಕೆಂಪೇಗೌಡರ ದೃಷ್ಟಿಕೋನ. ಅದೇ ಮಾದರಿಯಲ್ಲಿ ರಾಜ್ಯದ ಇತರೆ ಜಿಲ್ಲೆಗಳು ಬೆಳೆಯಬೇಕು ಎಂದು ತಿಳಿಸಿದರು.

ಮಹಾತ್ಮರ ಜಯಂತಿ ಆಚರಿಸುವ ಉದ್ದೇಶ, ಅವರನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳಬೇಕು, ಅವರ ಆದರ್ಶಗಳನ್ನು ಮಕ್ಕಳಿಗೆ ಸಾರ್ವಜನಿಕರಿಗೆ ತಿಳಿಸಿಕೊಡಬೇಕು ಎಂಬುದಾಗಿದೆ ಎಂದ ಅವರು, ಮಕ್ಕಳು ಇತಿಹಾಸ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್‌. ಹರೀಶ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌, ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್‌, ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಪ್ರಕಾಶ್‌ ಉಪಸ್ಥಿತರಿದ್ದರು.ಪೋಟೋ ಫೈಲ್‌ ನೇಮ್‌ 27 ಕೆಸಿಕೆಎಂ 1ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಉದ್ಘಾಟಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!