ಕನ್ನಡಪ್ರಭ ವಾರ್ತೆ ಶ್ರೀನಿವಾಸಪುರ
ಬುಧವಾರ ಬೆಳಗ್ಗೆ ಮಾನಸಿಕ ಅಸ್ವಸ್ಥ ಯರ್ರಂವಾರಪಲ್ಲಿ ಮೂಲದ ತಿರುಮಳಪ್ಪ (೫೫) ಆಲಿಯಾಸ್ ಗಾಂಧಿ ಎಂಬ ವ್ಯಕ್ತಿಯು ಧ್ವಂಸಗೊಳಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಕಂಬಕ್ಕೆ ಕಟ್ಟಿ ಹಾಕಿದ್ದು, ವಿಷಯ ತಿಳಿದ ತಕ್ಷಣ ಶ್ರೀನಿವಾಸಪುರ ಪಟ್ಟಣದ ಪೊಲೀಸ್ ನಿರೀಕ್ಷಕ ಎಂ.ಬಿ.ಗೂರವಕೊಳ್ಳ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾನಸಿಕ ಅಸ್ವಸ್ಥನನ್ನು ವಶಕ್ಕೆ ಪಡೆದು ಸ್ಥಳೀಯರನ್ನು ಸಮಾಧಾನಪಡಿಸಿದರು.
ಪೊಲೀಸರು ದೂರು ದಾಖಲಿಸಿಕೊಂಡು ನಂತರ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಒಕ್ಕಲಿಗ ಸಮುದಾಯದ ಯುವ ಮುಖಂಡರು ನ್ಯಾಯಕ್ಕಾಗಿ ಘೋಷಣೆ ಕೂಗಿ, ಪ್ರತಿಭಟನೆ ನಡೆಸುವ ವೇಳೆ ಕೆಲಕಾಲ ಸ್ಥಳದಲ್ಲಿ ಪೊಲೀಸರಿಗೂ ಹಾಗೂ ಸಮುದಾಯದ ಯುವ ಮುಖಂಡರ ಮಧ್ಯೆ ವಾಕ್ಸಮರ ನಡೆಯಿತು. ಘಟನೆಯ ಬಗ್ಗೆ ನ್ಯಾಯ ಒದಗಿಸಬೇಕು ಎಂದು ಸಮುದಾಯದ ಮುಖಂಡರು ಆಗ್ರಹಿಸಿದರು.
ಮುಖಂಡರಾದ ಶೇಷಾಪುರ ಗೋಪಾಲ್, ಜಿಪಂ ಮಾಜಿ ಸದಸ್ಯ ಶ್ರೀನಿವಾಸ್, ನೀಲಟೂರು ಚಂದ್ರಶೇಖರ್, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲ ರೆಡ್ಡಿ, ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪರೆಡ್ಡಿ ಇದ್ದರು.