ಕನ್ನಡಪ್ರಭ ವಾರ್ತೆ ಮೈಸೂರು
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ. ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕ ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದರು.ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಮಾತನಾಡಿ, ಇಂದಿನ ಬೆಂಗಳೂರು ದೇಶ ವಿದೇಶಿಗರಿಗೆ ರಸ್ತೆ ಬದಿಯಿಂದ ಮಾಲ್ ವರೆಗೂ ಆಶ್ರಯ ನೀಡಿದೆ ಎಂದರೆ ಸುಮಾರು 500 ವರ್ಷಗಳ ಹಿಂದೆ ಬೆಂಗಳೂರನ್ನು ನಿರ್ಮಿಸಿದ ಕೆಂಪೆಗೌಡರು ಶ್ರಮ ಹಾಗೂ ಕೊಡುಗೆ ಅಪಾರ. ಒಂದು ಕೆರೆಯಿಂದ ಇನ್ನೊಂದು ಕೆರೆಗೆ ನೀರು ಹರಿಯುವಂತೆ ರಾಜಕಾಲುವೆಗಳನ್ನು ನಿರ್ಮಿಸಿದ್ದರು. ಕನ್ನಡ ಭಾಷಾ ಮತ್ತು ಸ್ವದೇಶಿ ಉತ್ಪನ್ನ ರೈತಾಪಿ ಪ್ರಧಾನಕ್ಕೆ ಪ್ರೋತ್ಸಾಹ ನೀಡಿದ್ದವರು ಕೆಂಪೆಗೌಡರು ಎಂದರು.
ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಮುಖಂಡರಾದ ನಟರಾಜ್, ರಾಘವೇಂದ್ರ, ಚಂದ್ರು, ರಾಮಚಂದ್ರ, ನಂಜುಂಡಸ್ವಾಮಿ, ರವಿಚಂದ್ರ, ರಾಹುಲ್, ಮೋಹನ್, ನಿತೀಶ್ ಕುಮಾರ್, ಎಸ್.ಎನ್. ರಾಜೇಶ್, ಹರೀಶ್ ನಾಯ್ಡು, ಮೋಹನ್ ಕುಮಾರ್ ಮೊದಲಾದವರು ಇದ್ದರು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಯೋಗಾಂಬರ ಸಭಾಂಗಣದಲ್ಲಿ ಗೋಸಾಯಿ ಸೇವಾ ಟ್ರಸ್ಟ್ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಟ್ರಸ್ಟಿ ನಾಗಾರಜಪ್ಪ, ಕಾರ್ಯದರ್ಶಿ ರಾಘವೇಂದ್ರ ಭಟ್, ಉಪಾಧ್ಯಕ್ಷೆ ಸಂಧ್ಯಾ, ರವಿಕುಮಾರ್, ಎಸ್. ಸಂವೇದಿತಾ, ವಿ.ಕೆ. ರಾಹುಲ್, ಚೇತನ್ ಇದ್ದರು.