ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಿಂದ ಹಿಂದೂ ಧರ್ಮಕ್ಕೆ ಅವಮಾನ : ಸುನಿಲ್‌ ಕುಮಾರ್‌

KannadaprabhaNewsNetwork |  
Published : Jan 05, 2025, 01:32 AM ISTUpdated : Jan 05, 2025, 12:28 PM IST
ಸುನಿಲ್ | Kannada Prabha

ಸಾರಾಂಶ

  ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಉಡುಪಿ: ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ ಶ್ರೀ ನಾರಾಯಣಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ನಾರಾಯಣಗುರುಗಳನ್ನು ಅವಮಾನಿಸಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ಹೇಳಿಕೆ ದುರುದ್ದೇಶಪೂರಿತ ಮತ್ತು ಸಂಪೂರ್ಣ ಖಂಡನೀಯ. ತರ್ಕಬದ್ಧ ಚಿಂತನೆಯನ್ನು ಉತ್ತೇಜಿಸುವ ನೆಪದಲ್ಲಿ ಹಿಂದೂ ನಂಬಿಕೆಗಳನ್ನು ಅವರು ಅವಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸನಾತನ ಧರ್ಮವನ್ನು ದ್ವೇಷಿಸಬೇಕು ಎಂಬುದು ವಿಜಯನ್ ಅವರ ಶಿವಗಿರಿ ಸಮಾವೇಶದ ಭಾಷಣದ ತಿರುಳು. ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವೆ. ಅವರ ಹೇಳಿಕೆ ಹಿಂದೂಗಳನ್ನು ಘಾಸಿಗೊಳಿಸಿದೆ. ಹಿಂದೂ ಸಮಾಜ ಸುಧಾರಕರ ವಿರುದ್ಧ ಅಲ್ಲಿನ ಸರ್ಕಾರ ಮಾತನಾಡಲು ಆರಂಭಿಸಿದೆ. ಕಮ್ಯುನಿಸ್ಟ್‌ನ ಹಿಂದೂ ವಿರೋಧಿ ಇಂತಹ ದ್ವೇಷ ಪ್ರಚಾರವನ್ನು ಕೇರಳದ ಜನರು ತಿರಸ್ಕರಿಸಬೇಕು. ಅಲ್ಲದೆ ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದಿದ್ದಾರೆ.

ಹಿಂದೂ ಧರ್ಮ ಪ್ರತಿಪಾದಕರ ಬಗ್ಗೆ ಬಾಲಿಶ ಹೇಳಿಕೆ ನೀಡುವ ಪಿಣರಾಯಿ, ಅನ್ಯ ಧರ್ಮಧ ಧರ್ಮಗುರುಗಳ ಬಗ್ಗೆ ಇಂತಹ ಮಾತುಗಳನ್ನು ಹೇಳಲು ಧೈರ್ಯವಿದೆಯೇ ಎಂದು ಸವಾಲು ಹಾಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!