ನವಲಿ: ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಹೊರ ಹೊಲದಲ್ಲಿರುವ ಉದ್ಭವ ಮೂರ್ತಿ ಶ್ರೀಕೆರೆಮಾರುತೇಶ್ವರ ದೇವರ ಜಾತ್ರೆ ಶನಿವಾರ ದೇವರಿಗೆ ವಿಶೇಷ ಪೂಜೆ ಮಾಡುವ ಮೂಲಕ ವಿಜೃಂಭಣೆಯಿಂದ ನಡೆಯಿತು.
ನೂತನ ಉಚ್ಛಾಯ ಮೆರವಣಿಗೆ:
ಪ್ರತಿ ವರ್ಷದಂತೆ ಕಾರ್ತಿಕೋತ್ಸವ ಅಂಗವಾಗಿ ನೆಡೆಯುವ ಶ್ರೀಕೆರೆಮಾರುತೇಶ್ವರ ದೇವರಿಗೆ ಭಕ್ತಾದಿಗಳಿಂದ ತಯಾರಿಸಿದ ನೂತನ ಉಚ್ಛಾಯ ಉತ್ಸವದ ಮೆರವಣಿಗೆ ಶನಿವಾರ ಸಂಜೆ ಅದ್ಧೂರಿಯಾಗಿ ಡೊಳ್ಳು ಬಾರಿಸುವುದರ ಜತೆಗೆ ಮೆರವಣಿಗೆಯು ದೇವಾಲಯದಿಂದ ಎದುರು ಬಸವಣ್ಣ ಪಾದುಗಟ್ಟೆಯವರೆಗೆ ನಡೆಯಿತು.ವಿಶೇಷವಾಗಿ ಪ್ರಪ್ರಥಮ ಬಾರಿಗೆ ಗ್ರಾಮದ ಮಹಿಳೆಯರು ಪುರುಷರೊಂದಿಗೆ ಜೊತೆಗೂಡಿ ತಾವೇ ಸ್ವತಃ ದೇವರ ಉಚ್ಛಾಯ ಎಳೆಯುವ ಮೂಲಕ ಗಮನ ಸೆಳೆದರು.ಗ್ರಾಮದ ಕೆರೆ ಮಾರುತೇಶ್ವರ ಸೇವಾ ಟ್ರಸ್ಟ್ ವತಿಯಿಂದ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆ ಹಾಗೂ ಮಹಾ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಿ ದೇವರ ಕೃಪೆಗೆ ಪಾತ್ರರಾದರು.