ಬೃಹತ್‌ ರೋಡ್‌ ಶೋ ಮೂಲಕ ಕೇಸರಿ ಪಡೆ ಶಕ್ತಿ ಪ್ರದರ್ಶನ

KannadaprabhaNewsNetwork |  
Published : Oct 26, 2024, 12:47 AM IST
25ಎಚ್‌ವಿಆರ್‌4, 4ಎ, 4ಬ | Kannada Prabha

ಸಾರಾಂಶ

ಸಾವಿರಾರು ಕಾರ್ಯಕರ್ತರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಗೆ ಕಮಲ ಪಡೆ ರಣಕಹಳೆ ಮೊಳಗಿಸಿದ್ದು, ಬೃಹತ್‌ ರೋಡ್‌ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು.

ಶಿಗ್ಗಾಂವಿ: ಸಾವಿರಾರು ಕಾರ್ಯಕರ್ತರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಗೆ ಕಮಲ ಪಡೆ ರಣಕಹಳೆ ಮೊಳಗಿಸಿದ್ದು, ಬೃಹತ್‌ ರೋಡ್‌ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು.

ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿದ್ದ ಬೃಹತ್ ರೋಡ್ ಶೋಗೆ ಜನಸಾಗರವೇ ಹರಿದು ಬಂದಿತ್ತು. ಕೇಸರಿ ಬಾವುಟ ರಾರಾಜಿಸಿತು. ಮೋದಿ, ಭಾರತ್ ಮಾತಾ ಕೀ ಜೈ ಜಯಘೋಷ ಮುಗಿಲು ಮುಟ್ಟಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಬೈರತಿ ಬಸವರಾಜ, ಮುರುಗೇಶ ನಿರಾಣಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ಪ್ರತಿಪ್ರಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಕಮಲ ಪಡೆಯ ನಾಯಕರ ಸಂಗಮವೇ ಆಗಿದ್ದರಿಂದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು. ಪಟ್ಟಣದಲ್ಲಿ ರೋಡ್ ಶೋಕ್ಕೂ ಮುನ್ನ ತಾಲೂಕು ಕ್ರೀಡಾಂಗಣದ ಹತ್ತಿರದ ದ್ಯಾಮವ್ವನ ಪಾದಗಟ್ಟಿಯಿಂದ ಹಳೇಪೇಟಿ ಮಾರ್ಗವಾಗಿ ಗಂಗೀಭಾವಿ ಕ್ರಾಸ್ ವರೆಗೆ ಪಾದಯಾತ್ರೆ ನಡೆಸಲಾಯಿತು. ನಂತರ ಅಲ್ಲಿಂದ ತೆರೆದ ವಾಹನದಲ್ಲಿ ಎಲ್ಲ ನಾಯಕರು ಹಳೇ ಬಸ್ ನಿಲ್ದಾಣದ ಮಾರ್ಗವಾಗಿ ಕಿತ್ತೂರ ಚೆನ್ನಮ್ಮ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿದರು.ರೋಡ್ ಶೋ ಉದ್ದಕ್ಕೂ ಭರತ್ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಅವರು ಜನತೆಯತ್ತ ಕೈಬಿಸಿ ಗಮನ ಸೆಳೆದರು. ಸುಡು ಬಿಸಿಲನ್ನು ಲೆಕ್ಕಿಸದೆ ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಬಾವುಟ ಹಿಡಿದ ಕಾರ್ಯಕರ್ತರು ಭರತ್ ಹಾಗೂ ಬಸವರಾಜ ಬೊಮ್ಮಾಯಿ ಪರ ಜಯಘೋಷ ಕೂಗಿದರು. ಪಟ್ಟಣ ತುಂಬೆಲ್ಲ ಬಿಜೆಪಿ ಬಾವುಟಗಳು, ಕೇಸರಿ ಶಾಲುಗಳು ರಾರಾಜಿಸುತ್ತಿದ್ದವು.

PREV

Recommended Stories

ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!