ಶಿಮುಲ್ ಚುನಾವಣೆಗೆ ಕೆ.ಜಿ.ಸುರೇಶ್ ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : Aug 02, 2024, 12:51 AM IST
ಹೊನ್ನಾಳಿ ಫೋಟೋ 1ಎಚ್ಎಲ್ಐ1. ಶಿವಮೊಗ್ಗ,ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಗೆ ನ್ಯಾಮತಿ ತಾಲೂಕಿನಿಂದ ಕುರುವ ಹಾಲು ಉತ್ಪಾದಕರ  ಸಹಕಾರ ಸಂಘದ ಅಧ್ಯಕ್ಷ ಕುರುವ ಕೆ.ಜಿ.ಸುರೇಶ್ ಬುಧವಾರ  ಶಿಮುಲ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ  ಸಲ್ಲಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ ಹಾಲು ಒಕ್ಕೂಟದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಗೆ ನ್ಯಾಮತಿ ತಾಲೂಕಿನಿಂದ ಕುರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುರುವ ಕೆ.ಜಿ.ಸುರೇಶ್ ಶಿಮುಲ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಹೊನ್ನಾಳಿ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಗೆ ನ್ಯಾಮತಿ ತಾಲೂಕಿನಿಂದ ಕುರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುರುವ ಕೆ.ಜಿ.ಸುರೇಶ್ ಬುಧವಾರ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರೂಂದಿಗೆ ಮಾತನಾಡಿ, ಆಡಳಿತ ಮಂಡಳಿ ಚುನಾವಣೆ ಆ.14ರಂದು ನಡೆಯಲಿದ್ದು ನ್ಯಾಮತಿ ತಾಲೂಕಿನಿಂದ ನೂರಾರು ರೈತರ ಹಾಗೂ ಸಹಕಾರ ಬಂಧುಗಳ ಜೊತೆಗೆ ಶಿಮುಲ್ ಕಚೇರಿಗೆ ಬಂದು ಚುನಾವಣಾಧಿಕಾರಿಗೆ ಪತ್ರ ಸಲ್ಲಿಸಿದ್ದನೆ ಎಂದರು.

ನಾನು ರೈತ ಕುಟುಂಬದಿಂದ ಬಂದವನು ನನಗೆ ರೈತರ ಕಷ್ಟ ಮತ್ತು ಹೈನುಗಾರಿಕೆಯಲ್ಲಿನ ಕಷ್ಟ-ಸುಖಗಳ ಬಗ್ಗೆ ತಿಳಿದುಕೊಂಡಿದ್ದೆನೆ. ಈಗಾಗಲೇ ಕುರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷನಾಗಿ, ಶ್ರೀಕ್ಷೇತ್ರ ಧರ್ಮಸ್ಥಳ ಸಹಕಾರ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೆನೆ. ಆದ್ದರಿಂದ ರೈತರ ಹಿತಾಸಕ್ತಿ ಕಾಪಾಡಲು, ರೈತರ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತೇನೆ. ಅಲ್ಲದೆ ರೈತರ ಕಷ್ಟ ಸುಖದಲ್ಲಿ ಭಾಗಿಯಾಗುತ್ತೇನೆ. ಅದಕ್ಕಾಗಿ ಮತದಾನದ ಹಕ್ಕು ಪಡೆದ ಸಹಕಾರ ಬಂಧುಗಳು ನನ್ನನ್ನು ಬೆಂಬಲಿಸಿ ಎಂದು ಮಾನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು