ಶ್ರೀಶೈಲ ಮಠದ
ಕರ್ನಾಟಕ- ಮಹಾರಾಷ್ಟ್ರ- ಗೋವಾ ರಾಜ್ಯಗಳ ಪ್ರಮುಖ ಕೊಂಡಿಯಾಗಿರುವ ಬೆಳಗಾವಿ ನಗರ, ಗಾಂಜಾ ಘಾಟಿಗೆ ನಲುಗಿ ಹೋಗಿದೆ. ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಬಲು ಜೋರಾಗಿರುವುದನ್ನು ಅರಿತ ಖಾಕಿ ಪಡೆ ಅದನ್ನು ತಡೆಗಟ್ಟಲು ಸನ್ನದ್ಧವಾಗಿದೆ. ಕತ್ತಲಾಗುತ್ತಿದ್ದಂತೆ ನಗರದ ವಿವಿಧೆಡೆಗಳಲ್ಲಿ ಗಾಂಜಾ ಘಾಟು ಜೋರಾಗಿರುತ್ತದೆ. ಅತ್ಯಂತ ಭಯಾನಕ ಸಂಗತಿಯೆಂದರೆ ಶಾಲಾ, ಕಾಲೇಜು ಮಕ್ಕಳಿಗೂ ಗಾಂಜಾ ಪೂರೈಕೆಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ನಗರದಲ್ಲಿ ಖಾಕಿ ಪಡೆ ಮಟ್ಕಾ ದಂಧೆ, ಗಾಂಜಾ ಮಾರಾಟದ ವಿರುದ್ಧ ಸಮರ ಸಾರುವ ಮೂಲಕ ಸಮಾಜ ಘಾತುಕ ಶಕ್ತಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರಾಗಿ ಭೂಷಣ ಬೊರಸೆ ಅವರು ಅಧಿಕಾರವಹಿಸಿಕೊಂಡಾಗಿನಿಂದ ನಗರದ ಖಾಕಿ ಪಡೆ ಅಲರ್ಟ್ ಆಗಿದ್ದು, ಸಕ್ರಿಯವಾಗಿದೆ.3 ವರ್ಷದಲ್ಲಿ 40 ಕೆಜಿ ಗಾಂಜಾ ಜಪ್ತಿ:
342 ಮಟ್ಕಾ ಕೇಸ್:
ಗಾಂಜಾ ಘಾಟಿನ ಜೊತೆ ಜೊತೆಗೆ ಮಟ್ಕಾ ದಂಧೆ ಕೂಡ ಅವ್ಯಾಹತವಾಗಿ ನಡೆಯುತ್ತ ಬಂದಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪೊಲೀಸರು ಮಟ್ಕಾ, ಜೂಜಾಟಕ್ಕೆ ಸಂಬಂಧಿಸಿದಂತೆ 342 ಪ್ರಕರಣ ದಾಖಲಿಸಿಕೊಂಡಿದ್ದಾರೆ. 2023ರಲ್ಲಿ 123, 2024ರಲ್ಲಿ 124 ಹಾಗೂ 2025ರಲ್ಲಿ ಈವರೆಗೆ 95 ಪ್ರಕರಣ ದಾಖಲಿಸಲಾಗಿದೆ. ಒಟ್ಟು 256 ಜನ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅದು ಅಲ್ಲದೇ, ಕೆಲ ಆರೋಪಿಗಳನ್ನು ಗಡಿಪಾರಿಗೂ ಆದೇಶಿಸಲಾಗುತ್ತಿದೆ.ಬೆಳಗಾವಿಯನ್ನು ನಶೆ ಮುಕ್ತ ನಗರವನ್ನಾಗಿ ಮಾಡಬೇಕೆಂಬುದೇ ನಮ್ಮ ಆಶಯ. ಇದಕ್ಕೆ ನಾಗರಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಶಾಲಾ- ಕಾಲೇಜುಗಳಿಗೆ ಈಗಾಗಲೇ ಪತ್ರ ಬರೆದಿದ್ದೇವೆ. ಆ್ಯಂಟಿ ಡ್ರಗ್ ಕಮಿಟಿಗಳನ್ನು ಶಾಲಾ, ಕಾಲೇಜುಗಳಲ್ಲಿ ರಚಿಸಲಾಗಿದೆ. ಮಾದಕವಸ್ತುಗಳ ಮಾರಾಟ, ಸಾಗಾಟ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರಾದ ಭೂಷಣ ಬೊರಸೆ ತಿಳಿಸಿದ್ದಾರೆ.