- ಕಾಂಗ್ರೆಸ್ಸನ್ನು ಟೀಕಿಸುವ ನೈತಿಕತೆಯೇ ಬಿಜೆಪಿಯವರಿಗೆ ಇಲ್ಲ: ತಿರುಗೇಟು - - -
ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕ ಸಮರ್ಥ ಎಂ.ಶಾಮನೂರು ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಲಿ. ಅವಹೇಳನಕಾರಿ, ವೈಯಕ್ತಿಕ ಟೀಕಿ ಮಾಡುವುದು ಸರಿಯಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ಷೇಪಿಸಿದ್ದಾರೆ.
ಬಿಜೆಪಿ ನಾಯಕರು ಜಿಲ್ಲಾ ಸಚಿವರು, ಸಂಸದೆ ಹಾಗೂ ದಕ್ಷಿಣ ಶಾಸಕರ ಬಗ್ಗೆ ವೈಯಕ್ತಿಕವಾಗಿ ಟೀಕಿಸುವುದು, ಅವಹೇಳಕಾರಿಯಾಗಿ ಮಾತನಾಡುವುದು ಸರಿಯಲ್ಲ. ಸಚಿವರು, ಸಂಸದರು, ಶಾಸಕರನ್ನು ಟೀಕಿಸುವ ನೈತಿಕತೆ ಜಿಲ್ಲೆಯ ಬಿಜೆಪಿ ನಾಯಕರಿಗಿಲ್ಲ. ಬಿಜೆಪಿಯ ಯಶಂತರಾವ್ ಜಾಧವ್ ಸೇರಿದಂತೆ ಕೆಲ ನಾಯಕರು ಕಾಂಗ್ರೆಸ್ಸಿನ ಜನಪ್ರತಿನಿಧಿಗಳ ಬಗ್ಗೆ ಆರೋಪಿಸುವ ಮುನ್ನ ಸತ್ಯಾಸತ್ಯತೆ ತಿಳಿಯಲಿ ಎಂದು ಸಲಹೆ ನೀಡಿದ್ದಾರೆ.ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಟೊಂಕಕಟ್ಟಿ ಎಸ್.ಎಸ್. ಮಲ್ಲಿಕಾರ್ಜುನರ ಕುಟುಂಬ ಕಾರ್ಯೋನ್ಮುಖವಾಗಿದೆ. ವೈಯಕ್ತಿಕವಾಗಿ, ಅಸಭ್ಯ ಭಾಷೆ ಬಳಸುವುದು ರಾಜಕಾರಣಯಲ್ಲಿ ಒಳ್ಳೆಯದಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಖುದ್ದಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೇಶದಲ್ಲಿ ನಂಬರ್ ಭ್ರಷ್ಟ ಸರ್ಕಾರವೆಂದಿದ್ದನ್ನು ಮರೆಯಬಾರದು ಎಂದು ತಿಳಿಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ದಾವಣಗೆರೆಯಲ್ಲಿ ಯಾವ ರೀತಿ ಆಡಳಿತ ನಡೆಸಿದರು, ಕಾಮಗಾರಿ ಕೈಗೊಂಡರು? ಅಶೋಕ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಮೇಲ್ಸೇತುವೆ, ಖಾಸಗಿ ಬಸ್ ನಿಲ್ದಾಣ ನೋಡಿದರೆ ಗೊತ್ತಾಗುತ್ತದೆ. ಅಧಿಕಾರದಲ್ಲಿದ್ದಾಗ ಹಣ ಲೂಟಿ ಹೊಡೆಯುವುದರಲ್ಲಿ ಬಿಜೆಪಿ ನಾಯಕರು ಮಗ್ನರಾಗಿದ್ದರೆ ಹೊರತು ಅಭಿವೃದ್ಧಿ ಬಗ್ಗೆ ಯೋಚಿಸಲಿಲ್ಲ. ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂಬಂತೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ನಾಚಿಕೆ ಆಗಬೇಕು ಎಂದು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
-5ಕೆಡಿವಿಜಿ1: ಸೈಯದ್ ಖಾಲಿದ್ ಅಹ್ಮದ್.