ನರಸಿಂಹರಾಜಪುರ: ಇತ್ತೀಚಿಗೆ ಆನೆ ತುಳಿತದಿಂದ ಮೃತಪಟ್ಟ ಸೀತೂರು ಗ್ರಾಮದ ಕೆರೆಗದ್ದೆಯ ಉಮೇಶ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ನೀಡಿ ಉಮೇಶ್ ಅವರ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಉಮೇಶ್ ಅವರು ಕಾಡಾನೆಗಳ ದಾಳಿಗೆ ತುತ್ತಾಗಿ ಮೃತ ಪಟ್ಟಿರುವುದಕ್ಕೆ ಸರ್ಕಾರವು ಸಾಂತ್ವಾನ ಹೇಳುತ್ತಿದೆ. ನಾನು ಈ ಮನೆಗೆ 2 ಬಾರಿ ಭೇಟಿ ನೀಡಿದ್ದೇನೆ. ಸರ್ಕಾರದಿಂದ ಪರಿಹಾರ ನೀಡಿದ್ದೇವೆ. ಆನೆಗಳ ಕಾಟ ತಡೆಯಲು ಶಾಶ್ವತ ಪರಿಹಾರ ರೂಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್, ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ, ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಆಮಟೆ. ಕೊಪ್ಪ ಡಿ. ಎಫ್.ಓ ನಂದೀಶ್ ಮತ್ತಿತರರು ಇದ್ದರು.