ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಪಟ್ಟಣದ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿ.೫ರಂದು ಒಂದನೇ ವಾರ್ಡ್ನಿಂದ ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗುವುದು. ಪ್ರತಿ ದಿನ ಒಂದೊಂದು ವಾರ್ಡ್ನಂತೆ ಖಾತಾ ಆಂದೋಲನ ನಡೆಸಲಾಗುವುದು ಎಂದರು.
ಶನಿವಾರ ಭಾನುವಾರ ಹೊರತುಪಡಿಸಿ ವಾರದ ಐದು ದಿನ ಖಾತಾ ಆಂದೋಲನ ನಡೆಸಲಾಗುವುದು. ಒಂದು ದಿನ ಒಂದನೇ ವಾರ್ಡ್ ಮರುದಿನ ೩೧ನೇ ವಾರ್ಡ್ ಎಂಬ ರೀತಿಯಲ್ಲಿ ಖಾತಾ ಆಂದೋಲನಕ್ಕೆ ಸಿದ್ಧತೆ ಮಾಡಿಕೊಳ್ಳಿ. ಎರಡು ತಿಂಗಳ ಒಳಗೆ ಖಾತಾ ಆಂದೋಲನ ಪೂರ್ಣಗೊಳಿಸಲಾಗುವುದು ಎಂದರು.ಸಮಸ್ಯೆ ಪಟ್ಟಿ ಮಾಡಿ: ನಗರ ವ್ಯಾಪ್ತಿಯಲ್ಲಿ ಇರುವ ರಸ್ತೆ, ಚರಂಡಿ, ಯುಜಿಡಿ ಸೇರಿದಂತೆ ಮೂಲಭೂತ ಸಮಸ್ಯೆಗಳ ಬಗ್ಗೆ ಪಟ್ಟಿಮಾಡಿ ಆದ್ಯತೆ ಮೇರೆಗೆ ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡೋಣ. ಹಿಂದಿನ ಆರು ವರ್ಷಗಳಲ್ಲಿ ಪಟ್ಟಣದಲ್ಲಿ ಯಾವುದೇ ಕೆಲಸ ಆಗಿಲ್ಲ, ಅಭಿವೃದ್ಧಿ ರಥ ನಿಂತಲ್ಲಿಯೇ ಪಂಕ್ಚರ್ ಆಗಿ ನಿಂತಿದೆ. ಹಾಳಾಗಿರುವ ನಗರವನ್ನು ಸರಿಪಡಿಸುವ ಕೆಲಸ ಮಾಡೋಣ. ಇದಕ್ಕೆ ಸದಸ್ಯರು ಸಹ ಕೈಜೋಡಿಸಬೇಕು ಎಂದರು.
ಯುಜಿಡಿಗೆ ೩೦೦ ಕೋಟಿ ಬೇಕು:
ಇದೇ ವೇಳೆ ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು ನಗರಸಭೆಯಿಂದ ಸನ್ಮಾನಿಸಲಾಯಿತು.
ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಸದಸ್ಯರು:
ನಗರ ಪ್ರದೇಶದಲ್ಲಿ ನಡೆದಿರುವ ಕಾಮಗಾರಿಗಳು ಕಳೆಪೆಯಾಗಿವೆ. ಕಾಮಗಾರಿಗೆ ಅನುಮೋದನೆ ನೀಡುವಾಗ ನಗರಸಭೆ ಸದಸ್ಯರನ್ನು ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕಾಮಗಾರಿಗಳನ್ನು ಸರಿಯಾಗಿ ಪರಿಶೀಲನೆ ಮಾಡದೇ ಬಿಲ್ ಪಾಸ್ ಮಾಡಲಾಗುತ್ತಿದೆ. ನಗರಸಭೆ ಸದಸ್ಯರ ಕುರಿತು ಅಧಿಕಾರಿಗಳಿಗೆ ಗೌರವವಿಲ್ಲ. ನಮ್ಮ ಕರೆಯನ್ನು ಸ್ವೀಕರಿಸುವುದಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಸ್ಪಂದಿಸಿದ ಯೋಗೇಶ್ವರ್, ನಗರಸಭೆಯಲ್ಲಿ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೊರತೆಯನ್ನು ಪಟ್ಟಿಮಾಡಿಕೊಡಿ. ಅದೇ ರೀತಿ ಆಗಬೇಕಾಗಿರುವ ಕೆಲಸಗಳನ್ನು ಪಟ್ಟಿ ಮಾಡಿಕೊಡಿ. ನಾಳೆಯೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಸಂಬಂಧಿಸಿದ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಸಿಬ್ಬಂದಿ ಕೊರತೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.