ಖುಷಿ ಆತ್ಮಹತ್ಯೆ ಪ್ರಕರಣ ಸಂಶಯಾಸ್ಪದ, ತನಿಖೆಗೆ ಆಗ್ರಹ

KannadaprabhaNewsNetwork |  
Published : Jan 17, 2025, 12:46 AM IST
ಗಜೇಂದ್ರಗಡ ಮೃತ ವಿದ್ಯಾರ್ಥಿನಿಯ ಖುಷಿ ರಂಗ್ರೇಜ ಶವ ಸಂಸ್ಕಾರಕ್ಕೆ ತೆರಳುತ್ತಿರುವುದು. | Kannada Prabha

ಸಾರಾಂಶ

ನಮ್ಮ ಸಮಾಜದ ವಿದ್ಯಾರ್ಥಿನಿಯರು ಆತ್ಮಹತ್ಯೆಯಂತ ನಿರ್ಧಾರಕ್ಕೆ ಬರಬಾರದು ಹಾಗೂ ವಿದ್ಯಾರ್ಥಿನಿಯರನ್ನು ರೇಗಿಸುವವರಿಗೆ ತಕ್ಕ ಶಿಕ್ಷೆಯಾಗಬೇಕ

ಗಜೇಂದ್ರಗಡ: ಪಟ್ಟಣದ ಬಣಗಾರ ಓಣಿಯ ನಿವಾಸಿ ವಿದ್ಯಾರ್ಥಿನಿ ಖುಷಿ ಲಕ್ಷ್ಮಣಸಾ ರಂಗ್ರೇಜಿ (೧೫) ಆತ್ಮಹತ್ಯೆ ಸಂಶಯಾಸ್ಪದವಾಗಿದ್ದು, ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಮೃತ ವಿದ್ಯಾರ್ಥಿನಿಯ ಶವ ಸಂಸ್ಕಾರದ ಮೆರವಣಿಗೆ ನಡೆಸಿದ ಘಟನೆ ಗುರುವಾರ ನಡೆಯಿತು.

ಪಟ್ಟಣದ ಬಣಗಾರ ಓಣಿಯ ಖುಷಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬುಧವಾರ ರಾತ್ರಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು.

ಬಳಿಕ ಶವವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು. ರಾತ್ರಿ ಹಿಂದುಪರ ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು.

ಗುರುವಾರ ಮರಣೋತ್ತರ ಪರೀಕ್ಷೆ ಬಳಿಕ ಮೃತ ವಿದ್ಯಾರ್ಥಿನಿ ಮನೆಯಿಂದ ಹಿಂದೂಪರ ಸಂಘಟನೆ ಮುಖಂಡರು ಹಾಗೂ ಎಸ್.ಎಸ್.ಕೆ ಸಮಾಜದವರು ವಿದ್ಯಾರ್ಥಿನಿ ಮೃತದೇಹ ಅಂತ್ಯ ಸಂಸ್ಕಾರ ತೆರಳುವ ಮೆರವಣಿಗೆಯು ಕಾಲಕಾಲೇಶ್ವರ ವೃತ್ತ ತಲುಪುತ್ತಿದ್ದಂತೆ ಕೆಲವರು ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಲು ಮುಂದಾದಾಗ ಪಿಎಸ್‌ಐ ಸೋಮನಗೌಡ ಗೌಡ್ರ ನಿರಾಕರಿಸಿದರು. ಹೀಗಾಗಿ ಕೆಲ ಸಮಯ ಪೊಲೀಸರು ಹಾಗೂ ಸಮಾಜದ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಯಿತು. ಬಳಿಕ ಸಿಪಿಐ ಎಸ್.ಎಸ್. ಬೀಳಗಿ ಅವರಿಗೆ ಆತ್ಮಹತ್ಯೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಮನವಿ ನೀಡಿದ ಬಳಿಕ ಅಲ್ಲಿಂದ ತೆರಳಿ ಪಟ್ಟಣದ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸಲಾಯಿತು.

ಈ ಘಟನೆ ಹಿನ್ನೆಲೆಯಲ್ಲಿ ಎಸ್.ಎಸ್.ಕೆ ಸಮಾಜದ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ವಿದ್ಯಾರ್ಥಿನಿ ಶವದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ತಮ್ಮ ಮಗಳು ಖುಷಿ ಸುಖಾಸುಮ್ಮನೆ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಪಟ್ಟಣದ ಮುತ್ತುರಾಜ ಮ್ಯಾಗೇರಿ ಹಾಗೂ ಜುನೇದ ಕಂದಗಲ್ ಇವರಿಬ್ಬರ ಮೇಲೆ ಸಂಶಯವಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಖುಷಿ ತಾಯಿ ರೇಣುಕಾ ಲಕ್ಷ್ಮಣಸಾ ರಂಗ್ರೇಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಮ್ಮ ಸಮಾಜದ ವಿದ್ಯಾರ್ಥಿನಿಯರು ಆತ್ಮಹತ್ಯೆಯಂತ ನಿರ್ಧಾರಕ್ಕೆ ಬರಬಾರದು ಹಾಗೂ ವಿದ್ಯಾರ್ಥಿನಿಯರನ್ನು ರೇಗಿಸುವವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಸಮಾಜದವರು ಶವ ಸಂಸ್ಕಾರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಯಾವುದೇ ಮೆರವಣಿಗೆ ನಡೆಸಿಲ್ಲ ಎಂದು ಎಸ್.ಎಸ್.ಕೆ ಸಮಾಜದ ಅಧ್ಯಕ್ಷ ವಿಶ್ವನಾಥಸಾ ಮೇಘರಾಜ ಪ್ರತಿಕ್ರಿಯೆ ನೀಡಿದರು.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ