ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ । ಮಾಹಿತಿ ಶಿಕ್ಷಣ ಕಾರ್ಯಕ್ರಮ
ತಾಯಿ ಮತ್ತು ಮಗುವಿನ ಮರಣ ನಿಯಂತ್ರಿಸಲು ಕಿಲ್ಕಾರಿ ಯೋಜನೆಯ ಸಮರ್ಪಕ ಬಳಕೆ ಅಗತ್ಯವಾಗಿದೆ. ಗರ್ಭಿಣಿಯರಿಗೆ ಕಿಲ್ಕಾರಿ ಯೋಜನೆಯ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಆಡಿಯೋ ಸಂದೇಶಗಳನ್ನು ಆಲಿಸಲು ವ್ಯವಸ್ಥೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎನ್.ಜೆ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಿಲ್ಕಾರಿ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿಗೆ ಬರುವ ಎಲ್ಲಾ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವನೆಯ ಜೊತೆಗೆ ಮುಂಜಾಗ್ರತೆ ಕ್ರಮಗಳನ್ನು ತಿಳಿಸಬೇಕು ಎಂದರು.ಆಶಾ ಕಾರ್ಯಕರ್ತೆಯರು ನಿಯಮಿತವಾಗಿ ಗರ್ಭಿಣಿಯರ ಮನೆಗಳಿಗೆ ತೆರಳಿ, ಅವರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳೊಂದಿಗೆ ಸಹಕರಿಸಿ ಕಿಲ್ಕಾರಿ ಯೋಜನೆ ಅನುಷ್ಠಾನಕ್ಕೆ ಬೆಂಬಲಿಸಿಬೇಕು. ತಾಯಿ ಹಾಗೂ ಶಿಶು ಮರಣ ನಿಯಂತ್ರಿಸಲು, ಅಪೌಷ್ಟಿಕತೆ ಹೋಗಲಾಡಿಸಲು, ಮಕ್ಕಳ ಲಸಿಕಾ ಪ್ರಮಾಣ 100ಕ್ಕೆ 100ರಷ್ಟು ಗುರಿ ಸಾಧಿಸಲು ಕಿಲ್ಕಾರಿ ಯೋಜನೆ ಸಹಕಾರಿಯಾಗಿಲಿದೆ. ತಾಯಿ ಮಕ್ಕಳ ಆರೋಗ್ಯ ಬಲಪಡಿಸಲು ಕಿಲ್ಕಾರಿ ಯೋಜನೆಯನ್ನು ಜಿಲ್ಲೆಯ ಎಲ್ಲಾ ನೊಂದಾಯಿತ ಮತ್ತು ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ಮೊಬೈಲ್ ಮೂಲಕ ಮಾಹಿತಿ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಚಟುವಟಿಕೆಗಳನ್ನು ಸಭೆಯಲ್ಲಿ ಪ್ರದರ್ಶಿಸಿದರು.
ಯಲ್ಲದಕೆರೆ ಶುಶ್ರೂಷಾಧಿಕಾರಿ ಅಮಾನತು:
ಎಸ್.ಸಿದ್ದೇಶ್ವರ ಅವರಿಗೆ ಈ ಕುರಿತು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಮೇಲಾಧಿಕಾರಿಗಳು ಸೂಚನೆಗಳನ್ನು ಸಹ ನೀಡಿದ್ದರು. ಆದರೂ ಎಸ್.ಸಿದ್ದೇಶ್ವರ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ತೋರಲಿಲ್ಲ. ಆದ ಕಾರಣ ಆಡಳಿತಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಕೆಸಿಎಸ್(ಸಿಸಿಎ) ನಿಯಮಾವಳಿ-1957ರ ನಿಯಮ -10(1)ರ ಅನ್ವಯ ಅಮಾನತು ಮಾಡಲಾಗಿದೆ.